Thursday, March 19, 2026
Thursday, March 19, 2026

Actor Darshan ಕೊಲೆ ಕೇಸಿನ ಸಂಬಂಧ ನಟ ದರ್ಶನ್ ಅರೆಸ್ಟ್

Date:

Actor Darshan ನಟ ದರ್ಶನ್ ಮದುವೆಯಾಗಿದ್ದಾರೆ ಎನ್ನಲಾದ ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್ ಮಾಡಿದ್ದ ಎಂದು ಆರೋಪಿಸಿ ಚಿತ್ರದುರ್ಗ ಮೂಲದ ಯುವಕನನ್ನು ಕೊಲೆ ಮಾಡಲಾಗಿದ್ದು, ದರ್ಶನ್ ಮತ್ತು ಅವರ 10 ಜನ ಸಹಚರರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ಇಂದು ಬಂಧಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಮತ್ತು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ನಟಿ ಪವಿತ್ರಾ ಗೌಡ ಅವರನ್ನು ದರ್ಶನ್ ಮದುವೆ ಆಗಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇಬ್ಬರ ಫೋಟೋಗಳು ಜಾಲತಾಣದಲ್ಲಿ ಹರಿದಾಡಿದ್ದವು.

ಪವಿತ್ರಾ ಗೌಡ ಅವರಿಗೆ ಸ್ವಾಮಿ ಕೆಟ್ಟದಾಗಿ ಮೆಸೆಜ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ಕೋಪಗೊಂಡಿದ್ದ ದರ್ಶನ್ ತಮ್ಮ ಬೆಂಬಲಿಗರನ್ನು ಕಳುಹಿಸಿ ಥಳಿಸಿದ್ದರು ಎನ್ನಲಾಗಿದೆ.
ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ.

ಜೂನ್ 8ರಂದು ಆತನನ್ನು ನಗರದ ಶೆಡ್ ಒಂದರಲ್ಲಿ ಇರಿಸಿ ಕೊಲೆ ಮಾಡಲಾಗಿದೆ. ಜೂನ್ 09 ರಂದು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಕೊಲೆ ಮಾಡಿದ ಆರೋಪಿಗಳು ತಾವೇ ಕೊಂದಿರುವುದಾಗಿ ಒಪ್ಪಿಕೊಂಡಿದ್ದು, ದರ್ಶನ್ ಅವರ ಸೂಚನೆ ಮೇರೆಗೆ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಕೊಲೆ ಪ್ರಕರಣ ವಿಚಾರವಾಗಿ ಇಂದು ಪೊಲೀಸರು ಮೈಸೂರಿನ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

Actor Darshan ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಕೊಲೆಗಾರರ ತಾವು ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.

ಮೊದಲು ಮೂರು ಜನ ಪೊಲೀಸರಿಗೆ ಸರೆಂಡರ್ ಆಗಿದ್ದರು. ನಂತರ ಅವರನ್ನು ವಿಚಾರಣೆ ಮಾಡಿದ ಬಳಿಕ ಇದರಲ್ಲಿ ನಟ ದರ್ಶನ್ ಪಾತ್ರ ಇದೆ ಎಂಬುದು ಗೊತ್ತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...