Tuesday, February 3, 2026
Tuesday, February 3, 2026

Tungabhadra Dam ಜಲಾಶಯ & ಕೆರೆಗಳ ಅಭಿವೃದ್ದಿ ಬಗ್ಗೆ ಸಭೆ ಕರೆಯಲು‌ ಜನಸ್ಪಂದನ ಟ್ರಸ್ಟ್ ಮನವಿ

Date:

Tungabhadra Dam ಶಿವಮೊಗ್ಗದ ಭದ್ರಾ ಹಾಗೂ ತುಂಗಾ ಜಲಾಶಯ ಅಭಿವೃದ್ಧಿ, ಭದ್ರಾವತಿ ವ್ಯಾಪ್ತಿ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕು ಎಂದು ಜನ್ನಾಪುರದ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆಯು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಜಲಾಶಯ ಹಾಗೂ ಕೆರೆಗಳ ಅಭಿವೃದ್ಧಿ ಕರಿತ ಸಭೆ ಕರೆಯಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿಯಲ್ಲಿ ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆಗಳ ರೈತರ ಗದ್ದೆ ತೋಟಗಳಿಗೆ ನಗರ ಹಾಗೂ ಗ್ರಾಮಾಂತರ ಪ್ರದೇಶದ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ಯಾವುದೇ ಅಡೆತಡೆ ಇಲ್ಲದೇ ಸಮೃದ್ಧಿಯಾಗಿ ನಿರಂತರವಾಗಿ ನೀರನ್ನು ಹರಿಸಲು ಹಾಗೂ ಕೆರೆಗಳ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪ್ರಮುಖ ಬೇಡಿಕೆಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಈ ಸಂಬಂಧ ಅಧಿಕಾರಿವರ್ಗದವರ ಒಂದು ಸಭೆಯನ್ನು ಭದ್ರಾಜಲಾಶಯ ಸಮೀಪವಿರುವ ಅತಿಥಿಗೃಹದಲ್ಲಿ ಕರೆಯಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಗ್ರಹಿಸಲಾಗಿದೆ.

Tungabhadra Dam ಸುಮಾರು 10ಕ್ಕೂ ಅಧಿಕ ವರ್ಷಗಳಿಂದ ತುಂಗಾ ಜಲಾಶಯದಿಂದ (ಗಾಜನೂರು ಡ್ಯಾಂ) ಹೆಚ್ಚುವರಿ ನೀರು ಕಾಲುವೆಗಳ ಮೂಲಕ ಭದ್ರಾ ಜಲಾಶಯಕ್ಕೆ ಜೋಡಣೆ ಮಾಡುವ ಕಾಮಗಾರಿ (ಭದ್ರಾ ಮೇಲ್ದಂಡ ಯೋಜನೆ ಪ್ಯಾಕೇಜ್ ನಂ.೧)ಬಹಳ ಮಂದಗತಿಯಲ್ಲಿ ನಡೆಯುತ್ತಿದ್ದು, ರೈತರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ೨೦೨೫ ನೇ ಇಸವಿ ಮಳೆಗಾಲ ಪ್ರಾರಂಭವಾಗುವ ಮೊದಲು ಸದರಿ ಕಾಮಗಾರಿಯನ್ನು ತುರ್ತಾಗಿ ಮುಗಿಸಬೇಕು ಎಂದು ತಿಳಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...