Saturday, April 11, 2026
Saturday, April 11, 2026

Khadi And Village Industries Board ಕೆವಿಐಬಿ ಯಿಂದ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

Date:

Khadi And Village Industries Board ಶಿವಮೊಗ್ಗ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಬ್ಯಾಂಕುಗಳಿಂದ ಸಾಲ ಪಡೆದು ಉತ್ಪಾದನಾ/ ಸೇವಾ ಘಟಕ ಪ್ರಾರಂಭಿಸಲು ಗ್ರಾಮೀಣ ಮತ್ತು ನಗರ ಪ್ರದೇಶಗಳ ಯುವಕ/ಯುವತಿಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದನಾ ಮತ್ತು ಸೇವಾ ವಲಯದ ಚಟುವಟಿಕೆ ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಶೇ. 25 ರಿಂದ 35ರವರೆಗೆ ಮತ್ತು ನಗರ ಪ್ರದೇಶದವರಿಗೆ ಶೇ. 15 ರಿಂದ 25ರವರೆಗೆ ಸಹಾಯಧನ ಲಭ್ಯವಿದ್ದು, ಉತ್ಪಾದನಾ ಘಟಕಗಳಿಗೆ ರೂ. 50 ಲಕ್ಷ ಹಾಗೂ ಸೇವಾ ಘಟಕಗಳಿಗೆ 20 ಲಕ್ಷ ಗರಿಷ್ಠ ಯೋಜನಾ ವೆಚ್ಚದ ಘಟಕಗಳಿಗೆ ಬ್ಯಾಂಕುಗಳಿಂದ ಆರ್ಥಿಕ ನೆರವು ಪಡೆಯಲು ಅವಕಾಶವಿರುತ್ತದೆ.

ಆಸಕ್ತರು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ‘ಬಿ’ ಬ್ಲಾಕ್-7, ಎರಡನೇ ಮಹಡಿ, ಉಪವಿಭಾಗಾಧಿಕಾರಿಗಳ ಕಚೇರಿ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಿ ನಿಖರ ಮಾಹಿತಿ ಪಡೆದು ಜಾಲತಾಣ https://www.kviconline.gov.in/pmegpeportal ರಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ತಿಳಿಸಿದ್ದಾರೆ.

Khadi And Village Industries Board ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ. ಗೋವಿಂದಪ್ಪ ಇವರನ್ನು ಕಚೇರಿಯಲ್ಲಿ ಖುದ್ದಾಗಿ ಅಥವಾ ದೂ.ಸಂ.: 08182-223273/ 9480825637 ಇವರನ್ನು ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಾಸಕರಿಗೆ ನೀಡುವ ಅನುದಾನದಲ್ಲಿ ಪ್ರತೀ ವರ್ಷ ₹10 ಲಕ್ಷ ವಿಶೇಷಚೇತನರ ಅಭಿವೃದ್ಧಿಗೆ ನೀಡುವೆ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ,...

DC shivamogga ಹುಲಿಕಲ್ ಘಾಟಿ ಮಣ್ಣಿನ ಕುಸಿತ. ಮೃತ ಕಾರ್ಮಿಕರ ಕುಟುಂಬಗಳಿಗೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

DC shivamogga ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ...

Mescom ಏಪ್ರಿಲ್ 12. ಶಿವಮೊಗ್ಗದ ವಿನಾಯಕ ನಗರ, ರವೀಂದ್ರ ನಗರ‌ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Mescom ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ...