Thursday, August 13, 2026
Thursday, August 13, 2026

Kannada and Culture Department ವಿವಿಧ ಅಕಾಡೆಮಿಗಳಿಗೆ ನೇಮಕಾತಿ ಪರಿಷ್ಕೃತ ಆದೇಶ

Date:

Kannada and Culture Department ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಸ್ಥಾನಗಳಿಗೆ ಈ ಹಿಂದೆ ನೇಮಕಗೊಂಡವರು ಸಂಘ ಪರಿವಾರದ ಕಾರ್ಯಕರ್ತರು ಎಂಬ ವರದಿಗಳ ಹಿನ್ನೆಲೆ, ಅವರ ನೇಮಕಾತಿ ರದ್ದುಪಡಿಸಿ ಹೊಸ ನೇಮಕಾತಿ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಶಿವಮೊಗ್ಗದ ಶುಭಾ ಧನಂಜಯ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಸದಸ್ಯ ಸ್ಥಾನಕ್ಕೆ ಬಿ ಎಲ್ ರಾಜು ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಜಿ ವಿ ರವೀಂದ್ರನಾಥ (ರವೀಂದ್ರನಾಥ ಸಿರಿವರ) ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ ಎಂದು ತಿಳಿದು ಬಂದಿದೆ.

Kannada and Culture Department ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ಮೈಸೂರಿನ ಡಾ. ಕೃಪಾ ಫಡಕೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ಅವರನ್ನು ಈ ಹಿಂದೆ ನೇಮಿಸಲಾಗಿತ್ತು. ಇವರ ನಾಮನಿರ್ದೇಶನಗೊಳಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಸರ್ಕಾರ ಆದೇಶಿಸಿದೆ ಎಂದು ವರದಿ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...