Wednesday, June 24, 2026
Wednesday, June 24, 2026

B.S.Yediyurappa ಬಿಎಸ್ ವೈ ಅವರಿಂದ ನಿರೀಕ್ಷಣಾ ಜಾಮೀನಿಗೆ ಮನವಿ

Date:

B.S.Yediyurappa ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದಲ್ಲದೆ ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಬಾಲಕಿಯ ಸಹೋದರನ ಮನವಿ ಮೇರೆಗೆ ವಕೀಲ ಎಸ್‌ ಬಾಲನ್ ಅವರು ಜೂನ್ 10ರಂದು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ಇನ್ನು ನಡೆಯಬೇಕಿದೆ.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಗಂಭೀರತೆ ಪರಿಗಣಿಸಿದ ಸರಕಾರ ಸಿಐಡಿ ತನಿಖೆಗೆ ವಹಿಸಿತ್ತು.

ಈ ಮೊದಲು ಪ್ರಕರಣದ ರದ್ದು ಕೋರಿ ಅರ್ಜಿ ಸಲ್ಲಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಈಗ ಪೊಲೀಸರು ಬಂಧಿಸುವ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ದೂರಿನಲ್ಲಿ ಯಾವುದೇ ಅಪರಾಧದ ಅಂಶ ಕಂಡುಬರದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

B.S.Yediyurappa ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಗತ್ಯ ಬಿದ್ದರೆ ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಸ್ವಾಭಾವಿಕವಾಗಿ ಯಡಿಯೂರಪ್ಪ ಅವರು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಜೂನ್ 15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...

Sri Jayachamarajendra Government ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ಅರಿವಳಿಕೆ ತಜ್ಞರ ನೇಮಕಾತಿಗೆ ನೇರ ಸಂದರ್ಶನ.

Sri Jayachamarajendra Government ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಿವಮೊಗ್ಗ ಜಿಲ್ಲಾ ಆರೋಗ್ಯ...

S.N. Channabasappa ಅರ್ಹ ಬಡವರ ಬಿ.ಪಿ.ಎಲ್.ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು ದುಸ್ತರ- ಎಸ್.ಎನ್.ಚನ್ನಬಸಪ್ಪ.

S.N. Channabasappa ಅರ್ಹ ಬಡವರ ಬಿಪಿಎಲ್ ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು...

B.Y. Raghavendra ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ: ರಾಜ್ಯಪಾಲರಿಗೆ ಸಂಸದ ರಾಘವೇಂದ್ರ ಮನವಿ ಅರ್ಪಣೆ.

B.Y. Raghavendra ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ; ರಾಜ್ಯಪಾಲರ...