Thursday, December 18, 2025
Thursday, December 18, 2025

Anandpur Police ಆನಂದಪುರದ ಅಂದಾಸುರ ಗ್ರಾಮದಲ್ಲಿ ಬ್ಯಾಂಕ್ ಮ್ಯಾನೇಜರ್ ಮನೆಯಲ್ಲಿ ಕಳ್ಳತನ

Date:

Anandpur Police ಇಂಟರ್ಲಾಕ್ ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ ಕಳ್ಳತನವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಗ್ರಾಮದಲ್ಲಿ ನಡೆದಿದೆ.

ಆನಂದಪುರದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ರವರು ಆನಂದಪುರದಿಂದ ವರ್ಗಾವಣೆಯಾದ ಹಿನ್ನೆಲೆ ಮಣಿಪಾಲ್ ಗೆ ಶನಿವಾರ ಸಂಜೆ ತೆರಳಿದ್ದರು. ಬುಧವಾರ ಸಂಜೆ ಅಬ್ದುಲ್ ಅಹಮದ್ ರವರಿಗೆ ಸ್ಥಳೀಯರು ಕರೆ ಮಾಡಿ ನಿಮ್ಮ ಮನೆ ಬಾಗಿಲು ಯಾರೋ ಮುರಿದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Anandpur Police ತಕ್ಷಣ ಆನಂದಪುರ ಪೊಲೀಸ್ ಸಬ್ ಇನ್ಸೆಕ್ಟರ್ ಯುವರಾಜ್ ಕಂಬಳಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದಾಗ ಮನೆಯ ಇಂಟರ್ಲಾಕ್ ಮುರಿದಿರುವ ಮಾಹಿತಿ ಲಭ್ಯವಾಗಿದೆ.
ತಕ್ಷಣ ಮನೆಯ ಮಾಲೀಕರು ಮಣಿಪಾಲ್ ನಿಂದ ಆನಂದಪುರಕ್ಕೆ ಆಗಮಿಸಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, 330 ಗ್ರಾಂ ಬಂಗಾರದ ಆಭರಣ ಹಾಗೂ 90,000 ನಗದು ಮನೆಯ ಬೀರುವಿನಲ್ಲಿತ್ತು, ಕಳ್ಳರು ಇದನ್ನು ದೋಚಿದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...