Saturday, December 6, 2025
Saturday, December 6, 2025

District Court ಕೊಲೆಗಾರನಿಗೆ ಶಿಕ್ಷೆ ತೀರ್ಪು ಪ್ರಕಟಿಸಿದ ನ್ಯಾಯಾಲಯ

Date:

District Court ಕಳೆೆದ ಗ್ರಾಪಂ ಚುನಾವಣೆಯಲ್ಲಿ ಸಹಾಯ ಮಾಡಲಿಲ್ಲ ಎಂಬ ಕಾರಣಕ್ಕೆ ದ್ವೇಷ ಬೆಳೆಸಿಕೊಂಡು ತನ್ನ ಗ್ರಾಮದವನನ್ನೇ ಕೊಲೆ ಮಾಡಿದ್ದವನಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ರೂ 23,500 ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 3 ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದೆ.

ತಾಲೂಕಿನ ಹೊಳೆಬೆನವಳ್ಳಿ ದೊಡ್ಡತಾಂಡಾದ ವಾಸಿ ಕುಮಾರ್ ನಾಯ್ಕ್ (43)ಕೊಲೆ ಮಾಡಿ ಶಿಕ್ಷೆಗೊಳಗಾದವನು. ಮಹೇಶ್ ನಾಯ್ಕ್ ಕೊಲೆಯಾದವನು. ಗ್ರಾಮದ ಚಾನೆಲ್ ಹತ್ತಿರ ಮಹೇಶ್ ನಾಯ್ಕ ಅವರನ್ನು ಅಡ್ಡಗಟ್ಟಿ ಅವರ ಕುತ್ತಿಗೆ ಮತ್ತು ಮೈ ಕೈ ಗೆ ಹರಿತವಾದ ಆಯುಧ ದಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು.

ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಆಗಿನ ತನಿಖಾಧಿಕಾರಿ ಸಿಪಿಐ ಲೋಕೇಶ್ ಪ್ರಕರಣದ ತನಿಖೆ ಕೈಗೊಂಡು, ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

District Court ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಪುಷ್ಪಾವತಿ ಪ್ರಕರಣದ ವಾದ ಮಂಡಿಸಿದ್ದರು. 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶೆ ಪಲ್ಲ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...