Thursday, August 6, 2026
Thursday, August 6, 2026

Department of Agriculture ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ಮುಂದುವರಿಕೆಗೆ ಸರ್ಕಾರದ ಅಸಮ್ಮತಿ- ಸಚಿವ ಎಂ.ಬಿ.ಪಾಟೀಲ್

Date:

Department of Agriculture ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸಿನಿಮಾ ನಟ ದರ್ಶನ್‌ಗೆ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಸುವುದು ಅಸಾಧ್ಯ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಆಡಳಿತಾವಧಿಯಲ್ಲಿ ದರ್ಶನ್‌ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ 2021ರಲ್ಲಿ ನೇಮಕ ಮಾಡಲಾಗಿತ್ತು. ರೈತರ ಹಿತಕ್ಕಾಗಿ ಕೈಗೊಂಡ ಕಾರ್ಯಕ್ರಮಗಳ ಪ್ರಚಾರ, ಕೃಷಿಕರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಸಲುವಾಗಿ ಕೃಷಿ ಇಲಾಖೆಯಲ್ಲಿ ರಾಯಭಾರಿಯನ್ನು ನೇಮಕ ಮಾಡಲಾಗಿತ್ತು.
ಆದರೆ ಪ್ರಸ್ತುತ ಕೊಲೆ ಆರೋಪವನ್ನು ಹೊತ್ತಿರುವ ದರ್ಶನ್‌ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಮುಂದುವರಿಸುವುದಕ್ಕೆ ಸರಕಾರ ಅಸಮ್ಮತಿಯನ್ನು ಸೂಚಿಸಿದೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ದರ್ಶನ್‌ಗೆ ವಿಐಪಿ ಸೌಕರ್ಯ ನೀಡಿಲ್ಲ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆಯಾಗುತ್ತದೆ‌ ಎಂದು ಹೇಳಿದ್ದಾರೆ.

Department of Agriculture ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳಹಿಸಿದ್ದಾನೆ ಎಂಬ ಆರೋಪದಲ್ಲಿ ಚಿತ್ರದುರ್ಗದ ಅಪೋಲೋ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸ್ವಾಮಿಯನ್ನು ದರ್ಶನ್‌ ಮತ್ತು ಗ್ಯಾಂಗ್‌ ಅಪಹರಿಸಿ, ಕೊಲೆ ಮಾಡಿ ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಕಸದ ತೊಟ್ಟಿಯಲ್ಲಿ ಎಸೆದು ಹೋಗಿದ್ದರು. ಪ್ರಕರಣದಲ್ಲಿ ಇಲ್ಲಿಯವರೆಗೂ ಬರೋಬ್ಬರಿ 17 ಆರೋಪಿಗಳ ಪೈಕಿ 13 ಜನರನ್ನು ಬಂಧಿಸಲಾಗಿದೆ. ಇನ್ನು ನಾಲ್ವರು ಘಟನೆ ಬಳಿಕ ನಾಪತ್ತೆ ಆಗಿದ್ದರು. ಇದೀಗ ಆ ನಾಲ್ವರ ಪೈಕಿ ಓರ್ವ ಇಂದು ತಾನಾಗಿಯೇ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಕೇಸ್​ನ 8ನೇ ಆರೋಪಿ ಆಗಿರುವ ಆಟೋ ಚಾಲಕ ರವಿಶಂಕರ್​​ ಇಂದು ಚಿತ್ರದುರ್ಗ ಡಿವೈಎಸ್​ಪಿ ಕಚೇರಿಗೆ ಬಂದು ಶರಣಾಗಿದ್ದಾನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....