Thursday, July 9, 2026
Thursday, July 9, 2026

Kuvempu University ಯೋಗಾಭ್ಯಾಸದಿಂದ ದೈಹಿಕ,ಮಾನಸಿಕ & ಆಧ್ಯಾತ್ಮಿಕ ಪ್ರಯೋಜನ- ಪ್ರೊ.ಶರತ್ ಅನಂತಮೂರ್ತಿ

Date:

Kuvempu University ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿದೆ ಹೀಗಾಗಿ ದಿನನಿತ್ಯ ಯೋಗ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಕುವೆಂಪು ವಿವಿಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ  ವಿವಿಯ ವಿದ್ಯಾರ್ಥಿಗಳಿಗೆ ಎಂಟು ದಿನಗಳ ಕಾಲ ’ಯೋಗ ಅರಿವು ಕಾರ್ಯಕ್ರಮ’ವನ್ನು ಆಯೋಜಿಸಲಾಗಿದ್ದು ಕಾರ್ಯಕ್ರಮ ಉದ್ಘಾಟಿಸಿ ಕುಲಪತಿ ಮಾತನಾಡಿದರು.

ಯೋಗಭ್ಯಾಸವನ್ನು ದಿನನಿತ್ಯದ ಚಟುವಟಿಕೆಯ ಭಾಗವಾಗಿ ಅಳವಡಿಸಿಕೊಳ್ಳುವುದರಿಂದ ಹಲವಾರು ಪ್ರಯೋಜನಗಳು ಇರುವವೆಂದು ಅವರು ತಿಳಿಸಿದರು.
ಯೋಗಾಭ್ಯಾಸವು ಮಾನಸಿಕ ದೈಹಿಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಆಂತರಿಕ ಶಾಂತಿಯನ್ನು ವೃದ್ಧಿಸುತ್ತದೆ ಹಾಗೂ ನಮ್ಮ ಸಾಮರ್ಥ್ಯಗಳ ಹರಿಯವನ್ನು ತಿಳಿಸಿಕೊಡುತ್ತದೆ ಎಂದು ಹೇಳಿದರು.

Kuvempu University ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಮಂಜುನಾಥ್ ಎ ಎಲ್,  ಪರೀಕ್ಷಾಂಗ ಕುಲಸಚಿವ ಪ್ರೊ. ಗೋಪಿನಾಥ್ ಎಸ್ ಎಂ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್ ಡಿ ವಿರೂಪಾಕ್ಷ, ಡಾ. ಎಸ್ ಎಂ ರವೀಂದ್ರ ಗೌಡ ಉಪಸ್ಥಿತರಿದ್ದರು.

ಯೋಗ ಅರಿವು ಕಾರ್ಯಕ್ರಮದಲ್ಲಿ ವಿವಿಯ ವಿವಿಧ ವಿಭಾಗಗಳ ನೂರಕ್ಕೂ ಅಧಿಕ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...