Friday, December 19, 2025
Friday, December 19, 2025

Chittara Star Award ರಮೇಶ್ ಬೇಗಾರ್ ನಿರ್ದೇಶನದ ” ಜಲಪಾತ” ಚಿತ್ರಕ್ಕೆ ಚಿತ್ತಾರ ಸ್ಟಾರ್ ಅವಾರ್ಡ್

Date:

Chittara Star Award ಇಂಡಸ್ ಹರ್ಬ್ಸ್ ನ ರವೀಂದ್ರ ತುಂಬರಮನೆ ವಿಷಯ ವಿನ್ಯಾಸ ಗೈದು ನಿರ್ಮಿಸಿ, ಮಲೆನಾಡ ಕ್ರಿಯಾಶೀಲ ರಮೇಶ್ ಬೇಗಾರ್ ರಚಿಸಿ ನಿರ್ದೇಶಿಸಿದ ಜಲಪಾತ ಸಿನಿಮಾ ಕ್ಕೆ 2024 ರ ಚಿತ್ತಾರ ಸ್ಟಾರ್ ಅವಾರ್ಡ್ ಲಭಿಸಿದೆ.

ಉತ್ತಮ ಸಾಮಾಜಿಕ ಪರಿಣಾಮ ಬೀರುವ ಚಿತ್ರ ಎಂಬ ವಿಭಾಗದಲ್ಲಿ ಜಲಪಾತ ನಾಮ ನಿರ್ದೇಶನಗೊಂಡಿತ್ತು.

ಜೊತೆಗೆ ಚಿತ್ರದ ನಾಯಕ ನಟಿ ನಾಗಶ್ರೀ ಬೇಗಾರ್ ಮೊದಲ ಸಿನಿಮಾದ ಶ್ರೇಷ್ಠ ನಾಯಕಿ ವಿಭಾಗದಲ್ಲಿ ನಾಮಿನೆಟ್ ಆಗಿದ್ದರು. ಈ ಪೈಕಿ ಸಿನಿಮಾ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಆನ್ ಲೈನ್ ವೋಟಿಂಗ್ ಮತ್ತು ತೀರ್ಪು ಗಾರ ತಂಡ ದ ಮೂಲಕ ಆಯ್ಕೆ ಪ್ರಕ್ರಿಯೆ ನಡೆದಿತ್ತು.

ಜೂನ್ 15 ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ಗ್ರಾಂಡ್ ಸಭಾಂಗಣ ದಲ್ಲಿ ಚಿತ್ತಾರ ಸಿನಿ ಮ್ಯಾಗಜಿನ್ ಕಲರ್ಸ್ ಕನ್ನಡ ಸಹಯೋಗದಲ್ಲಿ ಆಯೋಜಿಸಿದ್ದ ಚಂದನವನ ಸಂಭ್ರಮ ಕಾರ್ಯಕ್ರಮ ದಲ್ಲಿ ಪ್ರಸಿದ್ಧ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮನ್ಸೋರೆ ಈ ಪ್ರಶಸ್ತಿ ನೀಡಿ ಗೌರವಿಸಿದರು. ನಿರಂಜನ್ ದೇಶಪಾಂಡೆ ಮತ್ತು ಜಾಹ್ನವಿ ಕಾರ್ತಿಕ್ ನಿರೂಪಣೆ ಯ ಈ ವರ್ಣ ರಂಜಿತ ಕಾರ್ಯಕ್ರಮ ದಲ್ಲಿ ಪ್ರಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ ಸಿನಿಮಾ ರಂಗದ ಪ್ರಸಿದ್ದ ಕಲಾವಿದರು ಭಾಗವಹಿಸಿದ್ದರು.

ಜಲಪಾತ ತಂಡದ ಪರವಾಗಿ ನಿರ್ಮಾಪಕ ರವೀಂದ್ರ ಮತ್ತು ನಿರ್ದೇಶಕ ರಮೇಶ್ ಬೇಗಾರ್, ನಾಯಕ ರಜನೀಶ್, ನಾಯಕಿ ನಾಗಶ್ರೀ ಈ ಪ್ರಶಸ್ತಿಯನ್ನು ಸ್ವೀಕರಿದರು.

Chittara Star Award ಕಾರ್ಯಕ್ರಮದಲ್ಲಿ ಮುಖ್ಯ ತಾಂತ್ರಿಕ ವರ್ಗ ಛಾಯಾಗ್ರಾಹಕ ಶಶಿರ ಶೃಂಗೇರಿ, ಸಂಕಲನ ಕಾರ ಅವಿನಾಶ್ ಶೃಂಗೇರಿ ಕಲಾನಿರ್ದೇಶಕ ಅಭಿಷೇಕ್ ಮತ್ತು ನಿರ್ವಾಹಕ ಕಾರ್ತಿಕ್ ಶೃಂಗೇರಿ ಇವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ರಮೇಶ್ ಮಾತನಾಡಿ ” ಇದೊಂದು ಸಾಮಾಜಿಕ ಸಂದೇಶ ದ ಚಿತ್ರವಾದರೂ ವಾಣಿಜ್ಯ ವಿಭಾಗ ದಲ್ಲೂ ಉತ್ತಮ ಸಾಧನೆ ಮಾಡಿದ ಹೆಗ್ಗಳಿಕೆ ಪಡೆದಿದೆ. ಮಲೆನಾಡ ಗ್ರಾಮೀಣ ಪ್ರದೇಶ ದ ಕಲಾವಿದ ತಂತ್ರಜ್ಞರಿಗೆ ಮೊದಲು ಒಳಿದ ಪ್ರಶಸ್ತಿ ಇದಾಗಿದ್ದು ಮಲೆನಾಡ ಸಮಸ್ತ ಜನತೆಗೆ ಪ್ರಶಸ್ತಿ ಯನ್ನು ಸಮರ್ಪಿಸುತ್ತೇವೆ ” ಎಂದರು.

2023 ರಲ್ಲಿ ಚಿತ್ರೀಕರಣ ಗೊಂಡು ಬಿಡುಗಡೆ ಆಗಿ ಎ ಬಿ ಸಿ ಕೇಂದ್ರ ಗಳಲ್ಲಿ 50 ದಿನ ಪ್ರದರ್ಶಿತ ಗೊಂಡ ಜಲಪಾತ ಪ್ರತಿಷ್ಠಿತ ಆಮೇಜಾನ್ ಪ್ರೈಮ್ ನಲ್ಲೂ ಬಿಡುಗಡೆ ಗೊಂಡಿದೆ ಮಾತ್ರವಲ್ಲ 8 ಕ್ಕೂ ಮಿಕ್ಕಿದ ಐ ಎಂ ಡಿ ಬಿ ರೇಟಿಂಗ್ ದಾಖಲಿಸಿದ ವಿಶಿಷ್ಟ ಸಾಧನೆ ಮಾಡಿ ಎಲ್ಲರ ಗಮನ ಸೆಳೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...