Thursday, February 5, 2026
Thursday, February 5, 2026

Film chamber ರೇಣುಕಯ್ಯಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್ ನಿಂದ ₹5 ಲಕ್ಷ ಸಾಂತ್ವನ ಹಣ- ಸುರೇಶ್

Date:

Film chamber ಚಿತ್ರನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಕುಟುಂಬಸ್ಥರನ್ನು ಇಂದು ಭೇಟಿಯಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷ ಸುರೇಶ್ ಸಂತ್ವಾನ ಹೇಳಿದರು. ಪಿಲ್ಮ್ ಚೇಂಬರ್ ವತಿಯಿಂದ ಅವರಿಗೆ 5 ಲಕ್ಷ ರೂ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವಿಲ್ಲಿಗೆ ಬಂದಿರೋದು ಸಂತಾಪಕ್ಕೆ ಅಷ್ಟೇ ಯಾವುದೇ ರಾಜೀ ಇಲ್ಲ. ನಮ್ಮ ಫಿಲ್ಮ್ ಚೇಂಬರ್‌ ವತಿಯಿಂದ ಐದು ಲಕ್ಷ ರೂಪಾಯಿ ನೀಡಿದ್ದೇವೆ. ಇಡೀ ಚಿತ್ರರಂಗ ಮುಂದೆಯೂ ಸಹ ನೊಂದ ಕುಟುಂಬದವರ ಜೊತೆ ನಿಲ್ಲಲಿದೆ. ಕುಟುಂಬಕ್ಕೆ ಐದು ಲಕ್ಷ ಸಾಂಕೇತಿಕವಾಗಿ ಕೊಡಲಾಗಿದೆ. ಮುಂದೆಯೂ ಇನ್ನೂ ಸಹಾಯ ಹೇಗೆ ಮಾಡಬೇಕು ಮಾಡ್ತಿವಿ. ಶಾಶ್ವತ ಪರಿಹಾರ ನೀಡಲು ನಿರ್ಧಾರ ಮಾಡುತ್ತೇವೆ. ಚಿತ್ರರಂಗ ಕ್ಷಮೆ ಕೇಳಲು ಇಲ್ಲಿಗೆ ಬಂದಿದ್ದೇವೆ ಇದನ್ನು ವೈಭವಿಕರಿಸಬಾರದು ಎಂದು ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಸುರೇಶ್ ಹೇಳಿದರು.
Film chamber ರೇಣುಕಾ ಸ್ವಾಮಿ ಹತ್ಯೆ ಘಟನೆ ಬಗ್ಗೆ ಕಾನೂನಿನಡಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದೀಗ ರಾಷ್ಟ್ರೀಯ ಅಂತಾರಾಷ್ಟ್ರೀಯ ಸುದ್ದಿಯಾಗಿದೆ. ಕನ್ನಡ ಚಿತ್ರರಂಗಕ್ಕೆ ಕೆಟ್ಟ ಹೆಸರು ಬಂದಿದೆ ಎಂದರು. ಇನ್ನು ಇದೇ ವೇಳೆ ದರ್ಶನ್ ಸಿನಿಮಾ ಬ್ಯಾನ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ನಿರ್ಧಾರ ನಾವು ಮಾಡೋಕೆ ಆಗೊಲ್ಲ. ಕಲಾವಿದರ ಸಂಘ, ನಿರ್ಮಾಪಕರ ಸಂಘ, ಫ್ಯಾನ್ಸ್ ಪಾಲೋವರ್ಸ್ ಕೂಡ ಇದೆ. ಅಲ್ಲಿ ಸಭೆ ಮಾಡಿದ ನಂತರ ಮುಂದಿನ ನಿರ್ಧಾರ ತಿಳಿಸುತ್ತೇವೆ ಎಂದರು.
ಈ ಹಿಂದೆಯೂ ರಾಜಕುಮಾರ್ ವಿಷ್ಣುವರ್ಧನ್ ಶಂಕರ್‌ನಾಗ್ ಅಂಬರೀಶ್‌ಗೂ ಫ್ಯಾನ್ ಇತ್ತು. ಆದರೆ ಇತ್ತೀಚಿನ ಫ್ಯಾನ್ಸ್ ಪ್ರಚೋದನೆಗೆ ಒಳಗಾಗುತ್ತಿದ್ದಾರೆ. ಆ ರೀತಿ ಯಾರೂ ಪ್ರಚೋದನೆಗೆ ಒಳಗಾಗಬಾರದು. ಆ ರೀತಿ ಒಳಗಾಗಿಯೇ ಇಂತಹ ಘಟನೆ ನಡೆದುಹೋಗಿದೆ. ಕೊರೊನಾ ಬಳಿಕ ಜನರು ಚಿತ್ರಮಂದಿರಕ್ಕೆ ಬರುತ್ತಿಲ್ಲ. ಚಿತ್ರರಂಗ, ವಾಣಿಜ್ಯ ಮಂಡಳಿ ಬಗ್ಗೆ ದೂಷಣೆ ಮಾಡಬೇಡಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...