Saturday, December 6, 2025
Saturday, December 6, 2025

Delhi Jal Board ದೆಹಲಿಯಲ್ಲಿ ಜಲಕ್ಷಾಮ. ಜಲಮಂಡಳಿ ಕಚೇರಿಗೆ ಜನಮುತ್ತಿಗೆ ಹಾಕಿ ಧ್ವಂಸ

Date:

Delhi Jal Board ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಬಿಜೆಪಿಯ ಮಹಿಳಾ ಪ್ರತಿಭಟನಾಕಾರರು ಚತ್ತರ್‌ಪುರದಲ್ಲಿರುವ ದೆಹಲಿ ಜಲ ಮಂಡಳಿ (ಡಿಜೆಬಿ) ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.

ನೀರಿನ ಸಮಸ್ಯೆ ಸಂಬಂಧ ಎಎಪಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ, ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾದಾಗ ದೆಹಲಿ ಜಲ ಮಂಡಳಿ ಕೋಟ್ಯಾಂತರ ರೂಪಾಯಿ ಲಾಭದಲ್ಲಿತ್ತು ಎಂದು ಹೇಳಿದ್ದಾರೆ.

“ಕೇಜ್ರಿವಾಲ್ ಅವರಿಗೆ ಒಂದು ವರ್ಷಕ್ಕೂ ಹೆಚ್ಚು ಕಾಲ ಡಿಜೆಬಿ ಅಧ್ಯಕ್ಷರಾಗಿ ಅಧಿಕಾರ ನೀಡಲಾಗಿದೆ. ಒಂದು ವರ್ಷಕ್ಕೂ ಹೆಚ್ಚಿನ ಆಡಿಟ್ ವರದಿ ಕಾಣೆಯಾಗಿದೆ. ಡಿಜೆಬಿ ಭಾರೀ ಸಾಲದಲ್ಲಿದೆ ಎಂಬುವುದು ವಿಚಿತ್ರ.

ಎಎಪಿಯ ಎಲ್ಲಾ ಸಚಿವರು ದೆಹಲಿಯಲ್ಲಿ ನೀರು ಕದಿಯುತ್ತಿದ್ದಾರೆ, ಟ್ಯಾಂಕರ್ ಮಾಫಿಯಾ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ದಾಂಧಲೆ ಬೆನ್ನಲ್ಲೇ ನೀರಿನ ಪೈಪ್‌ಲೈನ್‌ಗಳನ್ನು ಕಾಪಾಡುವಂತೆ ಸಚಿವೆ ಅತಿಶಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

Delhi Jal Board ಜಲ ಸಚಿವೆ ಅತಿಶಿ ಭಾನುವಾರ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರಿಗೆ ಪತ್ರ ಬರೆದಿದ್ದು, ಮುಂದಿನ 15 ದಿನಗಳವರೆಗೆ ಪ್ರಮುಖ ಪೈಪ್‌ಲೈನ್‌ಗಳಲ್ಲಿ ಗಸ್ತು ತಿರುಗುವಂತೆ, ರಕ್ಷಣಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ವಿನಂತಿಸಿದ್ದಾರೆ.

“ಯಮುನಾ ನದಿಯಲ್ಲಿ ನೀರಿನ ಕೊರತೆಯಿಂದಾಗಿ, ನೀರಿನ ಉತ್ಪಾದನೆಯು ಸುಮಾರು 70 ಎಂಜಿಡಿಯಷ್ಟು ಕುಸಿದಿದೆ. ದೆಹಲಿಯ ಅನೇಕ ಭಾಗಗಳು ನೀರಿನ ಕೊರತೆಯನ್ನು ಅನುಭವಿಸುತ್ತಿವೆ. ಈ ಪರಿಸ್ಥಿತಿಯಲ್ಲಿ, ಪ್ರತಿ ಹನಿ ನೀರು ಅಮೂಲ್ಯವಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...