Thursday, August 13, 2026
Thursday, August 13, 2026

CM Siddharamaih ನಮ್ಮ ಸರ್ಕಾರದಲ್ಲಿಅಲ್ಪ ಸಂಖ್ಯಾತರು & ಬಹು ಸಂಖ್ಯಾತರಿಗೆ ಒಂದೇ ರೀತಿಯ ರಕ್ಷಣೆ- ಸಿದ್ಧರಾಮಯ್ಯ

Date:

CM Siddharamaih ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳು. ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು.

ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ ಸಮಾಜ ಹಾಗೂ ಎಲ್ಲಾ ಧರ್ಮಗಳೂ ಏಳಿಗೆಯಾಗುತ್ತವೆ.

ನಮ್ಮದು ಸರ್ವಧರ್ಮ ಸಮನ್ವಯದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ. ಸಂವಿಧಾನ ಹೇಳುವಂತೆ ನಡೆದುಕೊಳ್ಳುತ್ತೇವೆ. ಯಾವುದೇ ತಾರತಮ್ಯ ಮಾಡುವುದಿಲ್ಲ. ಕರ್ನಾಟಕದ ಏಳು ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಈ ಕೆಲಸವನ್ನು ತಾರತಮ್ಯವಿಲ್ಲದೆ ಮಾಡುತ್ತೇವೆ.

CM Siddharamaih ಅಲ್ಪಸಂಖ್ಯಾತರು ಕೂಡ ಯಾವುದೇ ಕಾರಣಕ್ಕೂ ಭಯ ಆತಂಕ ಪಡಬೇಕಾದ ಅಗತ್ಯವಿಲ್ಲ. ನಮ್ಮಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರಿಗೆ ಒಂದೇ ರೀತಿಯಲ್ಲಿ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಅಭಿವೃದ್ಧಿಗೆ ಒಳ್ಳೆ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿಗಳು‌ ತಮ್ಮ x ಖಾತೆ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...