Tuesday, February 3, 2026
Tuesday, February 3, 2026

Rahul Gandhi ರಾಹುಲ್ ವಿರುದ್ಧ ಅಪಪ್ರಚಾರ : ಯುಟ್ಯೂಬರ್ ಅಜಿತ್ ಭಾರ್ತಿ ವಿರುದ್ಧ ಕೇಸ್

Date:

Rahul Gandhi ರಾಹುಲ್ ಗಾಂಧಿ ವಿರುದ್ದ ಅಪಪ್ರಚಾರ ನಡೆಸಿರುವ ಆರೋಪದ ಮೇಲೆ ಬಲಪಂಥೀಯ ಯೂಟ್ಯೂಬರ್ ಅಜೀತ್ ಭಾರ್ತಿ ವಿರುದ್ದ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಹಾಗೂ ವಕೀಲ ಬಿ.ಕೆ ಬೋಪಣ್ಣ ಅವರು ನೀಡಿದ ದೂರಿನನ್ವಯ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(ಎ)( ಧರ್ಮ, ಜಾತಿ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಮೂಡಿಸುವುದು) ಮತ್ತು 505(2) (ಜಾತಿ, ಧರ್ಮ, ಜನಾಂಗದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಉದ್ದೇಶದಿಂದ ನಕಲಿ ಸುದ್ದಿ ಹರಡುವುದು) ಅಡಿ ಜೂನ್ 15ರಂದು ಪ್ರಕರಣ ದಾಖಲಾಗಿದೆ.

Rahul Gandhi ಜೂನ್‌ 6ರಂದು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಅಜೀತ್ ಭಾರ್ತಿ” ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ರೀರಾಮ ಮಂದಿರದ ಬದಲಿಗೆ ಬಾಬ್ರಿ ಮಸೀದಿಯನ್ನು ಮರಳಿ ತರಲು ಉದ್ದೇಶಿಸಿದ್ದಾರೆ” ಎಂದು ಹೇಳಿದ್ದರು.

ಆದರೆ, ರಾಹುಲ್ ಗಾಂಧಿ ತಮ್ಮ ಯಾವುದೇ ಭಾಷಣಗಳಲ್ಲಿ ಅಂತಹ ಹೇಳಿಕೆ ನೀಡಿಲ್ಲ. ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಮತ್ತು ದ್ವೇಷ ಪ್ರಚೋದಿಸುವ ಉದ್ದೇಶದಿಂದ ಅಜೀತ್ ಭಾರ್ತಿ ಸುಳ್ಳು ಸುದ್ದಿ ಹರಡಿದ್ದಾರೆ.

ಈ ಮೂಲಕ ಸಮಾಜದಲ್ಲಿ ಸುವ್ಯವಸ್ಥೆ ಮತ್ತು ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ ಎಂದು ವಕೀಲ ಬಿ.ಕೆ ಬೋಪಣ್ಣ ದೂರಿನಲ್ಲಿ ಆರೋಪಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...