Wednesday, May 6, 2026
Wednesday, May 6, 2026

National Education Committee ಅರೆಕಾಲಿಕ ಉಪನ್ಯಾಸಕಿ ಸೇವೆ ಪೂರ್ಣಕಾಲಿಕ ಮಾಡಲು ಕೋರ್ಟ್ ತೀರ್ಪು

Date:

National Education Committee ಶಿವಮೊಗ್ಗ ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಹಿಂದಿ ವಿಷಯದ ಅರೆಕಾಲಿಕ ಉಪನ್ಯಾಸಕಿಯಾಗಿದ್ದ ಎಚ್.ಎಸ್.ವಿಜಯಲಕ್ಷ್ಮೀ ಅವರನ್ನು ಪೂರ್ಣ ಕಾಲಿಕ ಉಪನ್ಯಾಸಕಿಯನ್ನಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋಟ್೯ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಕಾಲೇಜಿನ ಆಡಳಿತ ಮಂಡಳಿಯಾದ ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಆದೇಶಿಸಿದೆ.

ಮುಂದುವರಿದು ಮೂರು ತಿಂಗಳೊಳಗಾಗಿ ಈ ಆದೇಶವನ್ನು ಜಾರಿಗೊಳಿಸಬೇಕು. ಇಲ್ಲವಾದಲ್ಲಿ ತಪ್ಪಿತಸ್ಥರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಕೋಟ್೯ ಎಚ್ಚರಿಕೆ ನೀಡಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಎಚ್.ಎಸ್.ವಿಜಯಲಕ್ಷ್ಮೀ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕಷ್ಣ ಎಸ್.ದೀಕ್ಷಿತ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದ್ದು, ಶಿಕ್ಷಕರು ಮತ್ತು ಉಪನ್ಯಾಸಕರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಜಾಗರೂಕ ಹೆಜ್ಜೆ ಇಡಬೇಕು ಎಂದು ಕಿವಿ ಮಾತು ಹೇಳಿದೆ.

ಶಿವಶಂಕರ ಭಟ್ಟ ಅವರ ನಿವೃತ್ತಿಯಿಂದ ಹಿಂದಿ ಭಾಷೆಯ ಉಪನ್ಯಾಸಕ ಹುದ್ದೆ ಖಾಲಿ ಇತ್ತು. ಆ ಹುದ್ದೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯು ವಿಜಯಲಕ್ಷ್ಮೀ ಅವರನ್ನು 1996ರ ಜೂನ್ 1ರಂದು ಅರೆಕಾಲಿಕ ಉಪನ್ಯಾಸಕಿಯನ್ನಾಗಿ ನೇಮಕ ಮಾಡಿಕೊಂಡಿತ್ತು.

National Education Committee ವಾರಕ್ಕೆ 16ಗಂಟೆಗಳ ಕಾರ್ಯಭಾರದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಏಕಸದಸ್ಯ ನ್ಯಾಯಪೀಠ, ಕರ್ನಾಟಕ ಶಿಕ್ಷಣ ಸಂಸ್ಥೆಗಳ (ಕಾಲೇಜು ಶಿಕ್ಷಣ) ನಿಯಮ 2003ನ್ನು ಸರಿಯಾಗಿ ಗ್ರಹಿಸದೆ ಅರ್ಜಿದಾರರನ್ನು ಪೂರ್ಣಕಾಲಿಕ ಉಪನ್ಯಾಸಕರನ್ನಾಗಿ ನೇಮಕ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವುದು ಸರಿಯಲ್ಲ. ನಿಯಮ 3ರಂತೆ ಸುಧೀರ್ಘ ಅವಧಿಯ ವರೆಗೆ ಅರ್ಜಿದಾರರು ಸಲ್ಲಿಸಿರುವ ಸೇವೆಯನ್ನು ಅನುದಾನಿತ ಸಂಸ್ಥೆಗಳಲ್ಲಿ ಬಳಸಿಕೊಳ್ಳಲು ಅವಕಾಶವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...