Saturday, March 21, 2026
Saturday, March 21, 2026

National Education Committee ಅರೆಕಾಲಿಕ ಉಪನ್ಯಾಸಕಿ ಸೇವೆ ಪೂರ್ಣಕಾಲಿಕ ಮಾಡಲು ಕೋರ್ಟ್ ತೀರ್ಪು

Date:

National Education Committee ಶಿವಮೊಗ್ಗ ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಹಿಂದಿ ವಿಷಯದ ಅರೆಕಾಲಿಕ ಉಪನ್ಯಾಸಕಿಯಾಗಿದ್ದ ಎಚ್.ಎಸ್.ವಿಜಯಲಕ್ಷ್ಮೀ ಅವರನ್ನು ಪೂರ್ಣ ಕಾಲಿಕ ಉಪನ್ಯಾಸಕಿಯನ್ನಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋಟ್೯ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಕಾಲೇಜಿನ ಆಡಳಿತ ಮಂಡಳಿಯಾದ ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಆದೇಶಿಸಿದೆ.

ಮುಂದುವರಿದು ಮೂರು ತಿಂಗಳೊಳಗಾಗಿ ಈ ಆದೇಶವನ್ನು ಜಾರಿಗೊಳಿಸಬೇಕು. ಇಲ್ಲವಾದಲ್ಲಿ ತಪ್ಪಿತಸ್ಥರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಕೋಟ್೯ ಎಚ್ಚರಿಕೆ ನೀಡಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಎಚ್.ಎಸ್.ವಿಜಯಲಕ್ಷ್ಮೀ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕಷ್ಣ ಎಸ್.ದೀಕ್ಷಿತ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದ್ದು, ಶಿಕ್ಷಕರು ಮತ್ತು ಉಪನ್ಯಾಸಕರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಜಾಗರೂಕ ಹೆಜ್ಜೆ ಇಡಬೇಕು ಎಂದು ಕಿವಿ ಮಾತು ಹೇಳಿದೆ.

ಶಿವಶಂಕರ ಭಟ್ಟ ಅವರ ನಿವೃತ್ತಿಯಿಂದ ಹಿಂದಿ ಭಾಷೆಯ ಉಪನ್ಯಾಸಕ ಹುದ್ದೆ ಖಾಲಿ ಇತ್ತು. ಆ ಹುದ್ದೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯು ವಿಜಯಲಕ್ಷ್ಮೀ ಅವರನ್ನು 1996ರ ಜೂನ್ 1ರಂದು ಅರೆಕಾಲಿಕ ಉಪನ್ಯಾಸಕಿಯನ್ನಾಗಿ ನೇಮಕ ಮಾಡಿಕೊಂಡಿತ್ತು.

National Education Committee ವಾರಕ್ಕೆ 16ಗಂಟೆಗಳ ಕಾರ್ಯಭಾರದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಏಕಸದಸ್ಯ ನ್ಯಾಯಪೀಠ, ಕರ್ನಾಟಕ ಶಿಕ್ಷಣ ಸಂಸ್ಥೆಗಳ (ಕಾಲೇಜು ಶಿಕ್ಷಣ) ನಿಯಮ 2003ನ್ನು ಸರಿಯಾಗಿ ಗ್ರಹಿಸದೆ ಅರ್ಜಿದಾರರನ್ನು ಪೂರ್ಣಕಾಲಿಕ ಉಪನ್ಯಾಸಕರನ್ನಾಗಿ ನೇಮಕ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವುದು ಸರಿಯಲ್ಲ. ನಿಯಮ 3ರಂತೆ ಸುಧೀರ್ಘ ಅವಧಿಯ ವರೆಗೆ ಅರ್ಜಿದಾರರು ಸಲ್ಲಿಸಿರುವ ಸೇವೆಯನ್ನು ಅನುದಾನಿತ ಸಂಸ್ಥೆಗಳಲ್ಲಿ ಬಳಸಿಕೊಳ್ಳಲು ಅವಕಾಶವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...