Wednesday, September 16, 2026
Wednesday, September 16, 2026

CM Siddharamaih ವಿಜಯನಗರ ಜಿಲ್ಲೆ ಎಸ್ಎಸ್ ಎಲ್ ಸಿ ಫಲಿತಾಂಶ ಕುಸಿತ- ಸಿದ್ಧರಾಮಯ್ಯ ಅಧಿಕಾರಿಗಳ ಮೇಲೆ “ಗರಂ”

Date:

CM Siddharamaih ಎಸ್​​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿದಿದೆ. ಹಾಗಾಗಿ ಡಿಡಿಪಿಐ, ಬಿಇಒ ಅಮಾನತು ಮಾಡುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೊಸಪೇಟೆಯಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ವಿಜಯನಗರ ಜಿಲ್ಲೆ 10ನೆ ಸ್ಥಾನದಿಂದ 27ನೆ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಡಿಡಿಪಿಐ ಹಾಗೂ ಬಿಇಒ ಅವರನ್ನು ಅಮಾನತು ಮಾಡುವಂತೆ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡಿದರು.
ಶೈಕ್ಷಣಿಕವಾಗಿ ವಿಜಯನಗರ ಜಿಲ್ಲೆ ಕುಸಿದಿರುವುದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು?. ಎಸ್ಎಸ್ಎಲ್ ಸಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಪ್ರಮಾಣ ಕುಸಿದಿರುವುದಕ್ಕೆ ನೀವೇ ಕಾರಣ ಎಂದು ಸಿಎಂ, ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈ ಬಾರಿ ಶೇ. 20 ರಷ್ಟು ಗ್ರೇಸ್​ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದೆ ಎಂದರೆ ನಿಮ್ಮ ಸಾಧನೆ ಏನು? ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಸಿಎಂ ಪ್ರಶ್ನಿಸಿದ್ದಾರೆ. ಇನ್ನು ಮುಂದಿನ ವರ್ಷ ಕೃಪಾಂಕ ಕೊಡಬಾರದು ಎಂದು ಹೇಳಿದ್ದೇನೆ ಎಂದರು.

CM Siddharamaih 10 ರಿಂದ 27ನೆ ಸ್ಥಾನಕ್ಕೆ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಜಾರಿರುವಾಗ ನಿಮಗೆ ನಾಚಿಕೆ ಆಗಬೇಕಲ್ವಾ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಪ್ರಶ್ನಿಸಿದ ಸಿದ್ದರಾಮಯ್ಯ, ಸಭೆ ಮಧ್ಯದಲ್ಲೆ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಜಿಲ್ಲೆಯ ಕಳಪೆ ಸಾಧನೆ ಬಗ್ಗೆ ಪ್ರಶ್ನಿಸಿದರು. ಅಲ್ಲದೆ, ಡಿಡಿಪಿಐ ಮತ್ತು ಬಿಇಒ ಇಬ್ಬರನ್ನೂ ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು. ಸಿಇಒ ಅವರಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...