Sunday, December 7, 2025
Sunday, December 7, 2025

BJP Yuva Morcha ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ವ್ಯಕ್ತಿಯ ಬಂಧನ

Date:

BJP Yuva Morcha ಮಹಿಳೆಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾ ಯುವಮೋರ್ಚ ಘಟಕದ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಅವರನ್ನು ಮಹಿಳಾ ಪೊಲೀಸರು ಇಂದು ಬೆಳಗಿನ ಜಾವ ಅವರ ಮನೆಯಿಂದ ಬಂಧಿಸಿದ್ದಾರೆ.

ಈ ಹಿಂದೆ ಸಾಗರದ ಮಹಿಳೆಯೊಬ್ಬರಿಗೆ ವಂಚಿಸಿದ ಪ್ರಕರಣದಲ್ಲಿ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.

ಕಾರಣಾಂತರದಿಂದ ದೂರು ದಾಖಲಾಗಿರಲಿಲ್ಲ. ಆದರೆ ಮಹಿಳೆಯು ಶಿವಮೊಗ್ಗ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದರಿಂದ ಮಹಿಳಾ ಠಾಣೆ ಪೊಲೀಸ್ ಇನ್ಪೆಕ್ಟರ್ ಭರತ್‌ಕುಮಾರ್ ಭಾನುವಾರ ಸಾಗರದಲ್ಲಿರುವ ಮನೆಗೆ ತೆರಳಿ ಅರುಣ್ ಅವರನ್ನು ಬಂಧಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ವಂಚಿಸಿದ ಪ್ರಕರಣ ಇದಾಗಿದೆ.
ಇತ್ತೀಚೆಗೆ ಮತ್ತೆ ಪ್ರಕರಣ ತೀವ್ರತೆ ಪಡೆದುಕೊಂಡಿದ್ದರಿಂದ ಬಂಧನವಾಗಿದ್ದು, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

BJP Yuva Morcha ಲೋಕಸಭಾ ಚುನಾವಣೆಯ ವೇಳೆ ಬಿಜೆಪಿ ಸಾಗರ ಘಟಕದ ಯುವಮುಖಂಡರಾದ ವಿನೋದ್ ಜೊತೆ ಐವರ ಗಡಿಪಾರು ಮಾಡಬೇಕೆಂದು ಇಲಾಖೆ ತಯಾರಿ ನಡೆಸಿತ್ತು. ಐವರಲ್ಲಿ ಅರುಣ್ ಕುಗ್ವೆನೂ ಒಬ್ಬರಾಗಿದ್ದರು.

ಇವರು ಮಾಜಿ ಶಾಸಕ ಹರತಾಳು ಹಾಲಪ್ಪನವರಿಗೆ ಆಪ್ತರಾಗಿದ್ದರು ಎನ್ನಲಾಗಿದೆ. ಈ ತಿಂಗಳಲ್ಲೇ ಅರುಣ್ ಗೆ ಬೇರೆ ಯುವತಿಯೊಂದಿಗೆ ಮದುವೆ ನಡೆಯಲಿತ್ತು.
ಅಷ್ಟರಲ್ಲಿ ಅವರ ಬಂಧನವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...