Friday, October 4, 2024
Friday, October 4, 2024

BJP Yuva Morcha ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ವ್ಯಕ್ತಿಯ ಬಂಧನ

Date:

BJP Yuva Morcha ಮಹಿಳೆಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾ ಯುವಮೋರ್ಚ ಘಟಕದ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಅವರನ್ನು ಮಹಿಳಾ ಪೊಲೀಸರು ಇಂದು ಬೆಳಗಿನ ಜಾವ ಅವರ ಮನೆಯಿಂದ ಬಂಧಿಸಿದ್ದಾರೆ.

ಈ ಹಿಂದೆ ಸಾಗರದ ಮಹಿಳೆಯೊಬ್ಬರಿಗೆ ವಂಚಿಸಿದ ಪ್ರಕರಣದಲ್ಲಿ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.

ಕಾರಣಾಂತರದಿಂದ ದೂರು ದಾಖಲಾಗಿರಲಿಲ್ಲ. ಆದರೆ ಮಹಿಳೆಯು ಶಿವಮೊಗ್ಗ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದರಿಂದ ಮಹಿಳಾ ಠಾಣೆ ಪೊಲೀಸ್ ಇನ್ಪೆಕ್ಟರ್ ಭರತ್‌ಕುಮಾರ್ ಭಾನುವಾರ ಸಾಗರದಲ್ಲಿರುವ ಮನೆಗೆ ತೆರಳಿ ಅರುಣ್ ಅವರನ್ನು ಬಂಧಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ವಂಚಿಸಿದ ಪ್ರಕರಣ ಇದಾಗಿದೆ.
ಇತ್ತೀಚೆಗೆ ಮತ್ತೆ ಪ್ರಕರಣ ತೀವ್ರತೆ ಪಡೆದುಕೊಂಡಿದ್ದರಿಂದ ಬಂಧನವಾಗಿದ್ದು, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

BJP Yuva Morcha ಲೋಕಸಭಾ ಚುನಾವಣೆಯ ವೇಳೆ ಬಿಜೆಪಿ ಸಾಗರ ಘಟಕದ ಯುವಮುಖಂಡರಾದ ವಿನೋದ್ ಜೊತೆ ಐವರ ಗಡಿಪಾರು ಮಾಡಬೇಕೆಂದು ಇಲಾಖೆ ತಯಾರಿ ನಡೆಸಿತ್ತು. ಐವರಲ್ಲಿ ಅರುಣ್ ಕುಗ್ವೆನೂ ಒಬ್ಬರಾಗಿದ್ದರು.

ಇವರು ಮಾಜಿ ಶಾಸಕ ಹರತಾಳು ಹಾಲಪ್ಪನವರಿಗೆ ಆಪ್ತರಾಗಿದ್ದರು ಎನ್ನಲಾಗಿದೆ. ಈ ತಿಂಗಳಲ್ಲೇ ಅರುಣ್ ಗೆ ಬೇರೆ ಯುವತಿಯೊಂದಿಗೆ ಮದುವೆ ನಡೆಯಲಿತ್ತು.
ಅಷ್ಟರಲ್ಲಿ ಅವರ ಬಂಧನವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...