Friday, August 14, 2026
Friday, August 14, 2026

Dr. Dhananjay Sarji ಎಲ್ಲರ ಸಲಹೆ ಸ್ವೀಕರಿಸಿ ಉತ್ತಮ ಕಾರ್ಯ ನಿರ್ವಹಿಸುವೆ- ಡಾ.ಧನಂಜಯ ಸರ್ಜಿ

Date:

Dr. Dhananjay Sarji ವಿಧಾನ ಪರಿಷತ್ ನೂತನ ಸದಸ್ಯ ಡಾ. ಧನಂಜಯ ಸರ್ಜಿ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಜಿಲ್ಲೆಯ ಕೈಗಾರಿಕೆ, ಪ್ರವಾಸೋದ್ಯಮ ಹಾಗೂ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅಗತ್ಯ ಸಹಕಾರ ನೀಡಬೇಕು ಎಂದು ಸಮಾಲೋಚನೆ ನಡೆಸಿದರು. ಜಿಲ್ಲೆಯ ವಿವಿಧ ಕ್ಷೇತ್ರಗಳ ಪ್ರಗತಿ ಕುರಿತು ಡಾ. ಧನಂಜಯ ಸರ್ಜಿ ಅವರೊಂದಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಚರ್ಚಿಸಿದರು.

ಸನ್ಮಾನ ಸ್ವೀಕರಿಸಿದ ಎಂಎಲ್‌ಸಿ ಡಾ. ಧನಂಜಯ ಸರ್ಜಿ, ಎಲ್ಲರ ಸಲಹೆಗಳನ್ನು ಸ್ವೀಕರಿಸಿ ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

Dr. Dhananjay Sarji ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಮುಖರಾದ ಬಿ.ಗೋಪಿನಾಥ್, ವಸಂತ ಹೋಬಳಿದಾರ್, ಡಿ.ಎಂ.ಶಂಕರಪ್ಪ, ಪರಮೇಶ್ವರ್, ಮರಿಸ್ವಾಮಿ, ಪ್ರದೀಪ್ ಯಲಿ, ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಗಣೇಶ್ ಅಂಗಡಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...