Monday, August 24, 2026
Monday, August 24, 2026

Kempegowda Jayanti ಜೂನ್ 2, ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

Date:

Kempegowda Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರ ಬೆಳಗ್ಗೆ 10.30 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

Kempegowda Jayanti ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಒಕ್ಕಲಿಗರ ಸಂಘಗಳ ಮುಖಂಡರು/ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶಿವಮೊಗ್ಗ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎಂಬಿ.ಎ ವಿಭಾಗದ ಸಹ ಪ್ರಾಧ್ಯಾಪಕ ಡಾ. ಗಿರಿಧರ್ ಕೆ.ವಿ.ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...