Bike Accident ಶಿವಮೊಗ್ಗ ತಾಲೂಕಿನ ಹಾರನಳ್ಳಿಯಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ
ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಟಾಟಾ ಏಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸತೀಶ್ (25) ಸಾವಿಗೀಡಾಗಿದ್ದಾನೆ. ಈತನು ಮೈಸವಳ್ಳಿ ಗ್ರಾಮದವನು. ಸಂಬಂಧಿಯೊಬ್ಬರ ಮಗುವನ್ನು ಹಾರನಹಳ್ಳಿಗೆ ಕರೆದುಕೊಂಡು ಆಸ್ಪತ್ರೆಯೊಂದಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಟಾಟಾ ಏಸ್
Bike Accident ಬೈಕ್ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಸತೀಶ್ ತಲೆಗೆ ಗಂಭೀರ ಪೆಟ್ಟು ತಗುಲಿತ್ತು. ಆಸ್ಪತ್ರೆಗೆ ಸಾಗಿಸಬೇಕೆನ್ನುವ ವೇಳೆಯೇ ಅವರು ಸಾವಿಗೀಡಾಗಿದ್ದರು. ಅದೃಷ್ಟಕ್ಕೆ ಮಗು ಭರಣಿ (7) ಪ್ರಾಣಾಪಾಯದಿಂದ ಪಾರಾಗಿದ್ದು, ಆಕೆಯ ಕಾಲಿಗೆ ಪೆಟ್ಟು ತಗುಲಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.