Tuesday, October 1, 2024
Tuesday, October 1, 2024

Shivamogga Peace Organization 10-15 ವರ್ಷಗಳಿಂದ ತಳವೂರಿರುವ ಅಧಿಕಾರಿಗಳ ವರ್ಗಾವಣೆಗೆ ಒತ್ತಾಯ

Date:

Shivamogga Peace Organization ಸಾರ್ವಜನಿಕರ ಕೆಲಸ ಮಾಡದೆ 10-15 ವರ್ಷದಿಂದ ಇಲ್ಲೇ ತಳವೂರಿರುವ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಬೇಕೆಂದು ಶಿವಮೊಗ್ಗ ಪೀಸ್ ಆರ್ಗನೈಸೇಶನ್ ಆಗ್ರಹಿಸಿದೆ.
ಪತ್ರಿಕಾಗೋಷ್ಟಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಘಟನೆಯ ಮುಖ್ಯಸ್ಥ ರಿಯಾಜ್ ಅಹಮದ್, ಸರ್ಕಾರಿ ಕೆಲಸ ಮಾಡದ ಈ ಎಲ್ಲ ಅಧಿಕಾರಿಗಳನ್ನು ಸಾಮೂಹಿಕ ವರ್ಗಾವಣೆ ಮಾಡುವಂತೆ ಆಗ್ರಹಿಸಿದರು.
ಕುಡಿಯುವ ನೀರು, ರಸ್ತೆ, ಚರಂಡಿ, ಒಳಚಂರಡಿ, ಬೀದಿ ದೀಪ, ಹಂದಿ, ನಾಯಿ ಕಾಟ, ಸಾಂಕ್ರ‍್ರಾಮಿಕ ರೋಗಗಳ ಬಗ್ಗೆ ಅಧಿಕಾರಿಗಳಿಗೆ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ. ಭಿಕ್ಷೆ ಬೇಡುವವರ ರೀತಿ ಅವರಲ್ಲಿ ಬೇಡಬೇಕಿದೆ. ಇನ್ನೂ ಕೆಲವು ಅಧಿಕಾರಿಗಳಿಗೆ ಮನವಿ ಮೇಲೆ ಮನವಿ ಕೊಟ್ಟರೂ ಸಮಸ್ಯೆ ಬಗ್ಗೆ ಗಮನ ಹರಿಸುತ್ತಿಲ್ಲ. ಪ್ರತಿಭಟನೆಯನ್ನೇ ನಡೆಸಬೇಕಾದ ಸಂದರ್ಭ ತಂದೊಡ್ಡಿದ್ದಾರೆ ಎಂದು ವಿವರಿಸಿದರು.
ಸಾರ್ವಜನಿಕ ದೂರುಗಳ ಬಗ್ಗೆ ಎಳ್ಳಷ್ಟೂ ಗಮನ ಹರಿಸದ ಅಧಿಕಾರಿಗಳ ಮನೋಭಾವ ಬದಲಾಗಬೇಕಿದೆ. ವಾರ್ಡುಗಳು ಇಂತಹವರಿದಾಗಿ ಸ್ಲಂಗಳು ಆಗುತ್ತಿವೆ. ೩೧ನೆಯ ವಾರ್ಡಿನ ಇಲಿಯಾಸ್ ನಗರದ ೧೦ನೆಯ ತಿರುವಿನಲ್ಲಿ ಕುಡಿಯುವ ನೀರಿಲ್ಲ. ಹಲವು ವರ್ಷಗಳ ಸಮಸ್ಯೆ ಇದು. ಮೇಲಿಂದ ಮೇಲೆ ಈ ಬಗ್ಗೆ ದೂರಿದ್ದರೂ ಕ್ರಮ ಜರುಗಿಸಿಲ್ಲ ಎಂದರು.
ಅಧಿಕಾರಿಗಳನ್ನು ಈ ಬಗ್ಗೆ ಕೇಳಲು ಹೋದರೆ ಸಿಗುತ್ತಿಲ್ಲ. ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತರ ವಾರ್ಡುಗಳನ್ನು ನಿರ್ಲಕ್ಷ್ಯಿಸುವ ಕೆಲಸ ನಡೆಯುತ್ತಿದೆ. ವಾರ್ಡಿನ ಸಿಬ್ಬಂದಿಗಳನ್ನು ಸಾಮೂಹಿಕವಾಗಿ ಪಾಲಿಕೆಯವರು ವರ್ಗಾವಣೆ ಮಾಡಬೇಕು. ಸಮಸ್ಯೆ ಬಗೆಹರಿಸಬೇಕೆಂದು ಕೋರಿದರು.
Shivamogga Peace Organization 10 ಬಾರಿ ಕರೆ ಮಾಡಿದ ಮೇಲೆ ಸ್ಥಳಕ್ಕೆ ಬರ್ತೀನಿ ಎನ್ನುತ್ತಾರೆ. ಆದರೆ ಬರೊಲ್ಲ. ಅಲ್ಪಸಂಖ್ಯಾತರ ವಾರ್ಡ್ಗೆ ಭೇಟಿ ನೀಡದೆ, ಜನ ಸಾಮಾನ್ಯರ ಸಮಸ್ಯೆ ಬಗೆಹರಿಸದ, ರಾಜಕಾರಣಿಗಳ ಮಾತನ್ನು ಮಾತ್ರ ಕೇಳುವ ಅಧಿಕಾರಿಗಳನ್ನು ಸಾಮೂಹಿಕ ವರ್ಗಾವಣೆ ಮಾಡುವಂತೆ ರಿಯಾಜ್ ಅಹ್ಮದ್ ಆಗ್ರಹಿಸಿದರು.
ಸಯ್ಯದ್ ಸೈಫುಲ್ಲಾ, ಮಕ್ಬ್ಬೂಲ್ ಅಹ್ಮದ್, ನಾಸಿರ್ ಅಹ್ಮದ್, ಇಜಾಜ್ ಅಹ್ಮದ್, ಮೊಹಮದ್ ಸೂಫಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...