Saturday, April 11, 2026
Saturday, April 11, 2026

Shivamogga Police ನ್ಯಾಯಾಂಗ ವ್ಯವಸ್ಥೆ ವಿರುದ್ಧ ಎಸ್ ಐ ಹೇಳಿಕೆ ವೈರಲ್: ವಿಚಾರಣೆಗೆ ಪೂರ್ವ ವಲಯ ಐಜಿಪಿಯಿಂದ ನೋಟೀಸ್

Date:

Shivamogga Police ದುಡ್ಡು ಕೊಟ್ಟರೇ ಜಡ್ಜ್ ಜಾಮೀನು ನೀಡುತ್ತಾರೆ ಎಂಬ ಹೇಳಿಕೆ ನೀಡಿದ ಇನ್ಸ್‌ಪೆಕ್ಟರ್ ಚಂದ್ರಕಲಾ ವಿರುದ್ಧ ವಿಚಾರಣೆಗೆ ಆದೇಶ ಹೊರಡಿಸಲಾಗಿದೆ.

ವಿನೋಬ ನಗರ ಠಾಣೆ ಇನ್ಸ್‌ಪೆಕ್ಟರ್ ಚಂದ್ರಕಲಾ ಅವರು ಲಕ್ಷಗಟ್ಟಲೆ ದುಡ್ಡು ಕೊಟ್ಟರೆ ಜಡ್ಜ್ ಕೂಡ ಬೇಲ್ ನೀಡುತ್ತಾರೆ ಅಂತ ಫೋನಿನಲ್ಲಿ ಮಾತಾಡಿರೋ ಆಡಿಯೋವೊಂದು ವೈರಲ್ ಆಗಿತ್ತು. ಅಲ್ಲದೇ ಈ ಇಬ್ಬರ ಆಡಿಯೋ ನ್ಯಾಯಾಂಗ ಹಾಗೂ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಅಡಕೆ ಮಂಡಿ ಮಾಲೀಕ‌ ಮಂಜುನಾಥ ಗೌಡ ಎಂಬುವವರ ಜೊತೆ ಇನ್ಸ್‌ಪೆಕ್ಟರ್ ಚಂದ್ರಕಲಾ ಮಾತನಾಡುವ ಸಂಭಾಷಣೆ ವೈರಲ್ ಆದ ಬಳಿಕ ಅವರನ್ನು ಪೂರ್ವ ವಲಯ ಐಜಿಪಿ ಡಾ.ತ್ಯಾಗರಾಜನ್ ಅವರು ವಿಚಾರಣೆಗೆ ಬರುವಂತೆ ಆದೇಶಿಸಿದ್ದಾರೆ.

ಮಂಜುನಾಥ ಗೌಡ ಎಂಬುವವರು ತಮ್ಮ ಮಂಡಿಯಲ್ಲಿ ನಡೆದಿದ್ದ ಹಣದ ವಂಚನೆ ಕುರಿತು ಠಾಣೆಗೆ ದೂರು ನೀಡಿದ್ದರು. ಜೊತೆಗೆ ವಂಚಕರು ಬೇಲ್ ಮೇಲೆ ಓಡಾಡುತ್ತಿದ್ದಾರೆ ಎಂದು ಹೇಳಿದ್ದರು.
ಈ ವೇಳೆ ವಿನೋಬ ನಗರ ಠಾಣೆ ಇನ್ಸ್‌ಪೆಕ್ಟರ್ ಚಂದ್ರಕಲಾ ಲಕ್ಷಗಟ್ಟಲೆ ದುಡ್ಡು ಕೊಟ್ಟರೆ ಜಡ್ಜ್ ಸಹ ಬೇಲ್ ನೀಡುತ್ತಾರೆ ಅಂತ ಹೇಳಿದ್ದರು.

Shivamogga Police ಇನ್ಸ್‌ಪೆಕ್ಟರ್ ಚಂದ್ರಕಲಾ ಮಾತನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಧೀಶರು, ಎಸ್ಪಿಯ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಇಲಾಖೆ ಇನ್ಸ್‌ಪೆಕ್ಟರ್ ಚಂದ್ರಕಲಾಗೆ ಶೋ ಕಾಸ್ ನೋಟಿಸ್ ನೀಡಿದ್ದಾರೆ.

ಇನ್ನು, ಐಜಿಪಿ ತ್ಯಾಗರಾಜನ್ ಅವರು ಪತ್ರ ತಲುಪಿದ 7 ದಿನದೊಳಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ಹೀಗಾಗಿ ಈ ಕೇಸ್ ಸಂಬಂಧ ವಿಚಾರಣಾಧಿಕಾರಿಯಾಗಿ ಶಿವಮೊಗ್ಗ ಉಪ ವಿಭಾಗದ 1 ಡಿಎಸ್ಪಿಯನ್ನು ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Krishnashastry ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

ಲೇ: ಪ್ರಸಾದ್ ಶ್ರೀವತ್ಸ.ದಾವಣಗೆರೆ. Krishnashastry ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...