Thursday, December 18, 2025
Thursday, December 18, 2025

Shivamogga District Police ವಿದ್ಯಾರ್ಥಿಗಳು ಮಾದಕ ವಸ್ತುಗಳ ದಾಸರಾಗಬೇಡಿ -ಗೋಪಾಲಕೃಷ್ಣ ನಾಯಕ್

Date:

Shivamogga District Police ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ (ರಿ) ಸಾಗರ, ಲಾಲ್ ಬಹದ್ದೂರ್ ಕಲಾ,ವಿಜ್ಞಾನ ಮತ್ತು ಎಸ್.ಬಿ.ಸೊಲಬಣ್ಣ ಶೆಟ್ಟಿ ವಾಣಿಜ್ಯ ಕಾಲೇಜಿನಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಸಾಗರ ಉಪ ವಿಭಾಗ, ಸಾಗರ ಗ್ರಾಮಂತರ ಪೊಲೀಸ್ ಠಾಣೆ ಇವರ ಸಹಯೋಗದೊಂದಿಗೆ ದಿನಾಂಕ: 26.06.2024ರ ಬುಧವಾರದಂದು ಎಲ್.ಬಿ.ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಶ್ರೀ ಗೋಪಾಲಕೃಷ್ಣ ನಾಯ್ಕ್ ಡಿ.ವೈ.ಎಸ್.ಪಿ.ಸಾಗರ ಉಪವಿಭಾಗ,ಸಾಗರ ಇವರು ವಿದ್ಯಾರ್ಥಿಗಳನ್ನು ಕುರಿತು ಇಂದಿನ ಯುವಜನತೆ ಮಾದಕ ವಸ್ತುಗಳ ದಾಸರಾಗುತ್ತಿರುವುದರಿಂದ ದೂರವಿರುವುದು ಹಾಗೂ ಸಮಾಜದಲ್ಲಿರುವ ಯುವಜನರಿಗೆ ಈ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿ ಹೇಳಿದರು.

Shivamogga District Police ಹಾಗೂ ಇನ್ನೋರ್ವ ಅತಿಥಿಯಾಗಿದ್ದ ಶ್ರೀ ಮಹಾಬಲೇಶ್ವರ ನಾಯ್ಕ ಪಿ.ಎಸ್.ಐ ಸಾಗರ ಗ್ರಾಮಂತರ ಪೊಲೀಸ್ ಠಾಣೆ ಇವರು ವಿದ್ಯಾರ್ಥಿಗಳನ್ನು ಕುರಿತು ರಸ್ತೆ ಸುರಕ್ಷತೆ ಮತ್ತು ವಾಹನ ಚಾಲನೆಯ ನಿಯಮ ಪಾಲನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಹೆಚ್.ಎಂ.ಶಿವಕುಮಾರ ಪ್ರಧಾನ ಕಾರ್ಯದರ್ಶಿಗಳು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಸಾಗರ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಸತ್ಯನಾರಾಯಣ ಎಂ.ಆರ್. ಜಂಟಿ ಕಾರ್ಯದರ್ಶಿಗಳು, ಪ್ರಾಂಶುಪಾಲರಾದ ಡಾ. ಲಕ್ಷ್ಮೀಶ ಎ.ಎಸ್.ಉಪಸ್ಥಿತಿ ಇದ್ದರು. ಕಾರ್ಯಕ್ರಮದಲ್ಲಿರುವ ಎಲ್ಲಾ ಗಣ್ಯರನ್ನು ಶ್ರೀ ಅಶೋಕ ಎಂ. ಎನ್.ಎಸ್.ಎಸ್ ಅಧಿಕಾರಿ ಸ್ವಾಗತಿಸಿದರು, ಲೆಫ್ಟಿನೆಂಟ್ ನೂತನ್ ಏನ್.ಸಿ.ಸಿ ಅಧಿಕಾರಿ ಎಲ್ಲರನ್ನು ವಂದಿಸಿದರು, ಮತ್ತು ಈ ಕಾರ್ಯಕ್ರಮದ ನಿರೂಪಣೆಯನ್ನು ಡಾ. ನಿರಂಜನ್ ಮೂರ್ತಿ ಟಿ ನೆರವೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...