Wednesday, May 6, 2026
Wednesday, May 6, 2026

Horticulture Department ತೋಟಗಾರಿಕಾ ಮಿಷನ್ ಯೋಜನೆ 2024-25 ಇದರ ಲಾಭ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

Date:

Horticulture Department ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ (ಅಂಗಾಂಶ ಬಾಳೆ, ಹೈಬ್ರಿಡ್ ತರಕಾರಿ, ಕಾಳುಮೆಣಸು, ಬಿಡಿಹೂ, ಸುಗಂಧರಾಜ ಮತ್ತು ಗುಲಾಬಿ), ನೀರು ಸಂರಕ್ಷಣಾ ಘಟಕಗಳಾದ ವೈಯುಕ್ತಿ ಕೃಷಿ ಹೊಂಡ ಮತ್ತು ಸಮುದಾಯ ಕೃಷಿಹೊಂಡ ನಿರ್ಮಾಣ, ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ನೆಲಹೊದಿಕೆ (ಪ್ಲಾಸ್ಟಿಕ್ ಮಲ್ಚಿಂಗ್), ಮಿನಿ ಟ್ರ್ಯಾಕ್ಟರ್ ಮತ್ತು ಮಾನವ ಸಂಪನ್ಮೂಲ ಕಾರ್ಯಕ್ರಮಗಳಾದ ರೈತರಿಗೆ ತರಬೇತಿ ಮತ್ತು ಶೈಕ್ಷಣಿಕ ಪ್ರವಾಸ ಇತ್ಯಾದಿ ಕಾರ್ಯಕ್ರಮಗಳ ಸೌಲಭ್ಯವನ್ನು ಪಡೆಯಬಹುದಾಗಿದೆ.

ಕೃಷಿ ಯಾಂತ್ರೀಕರಣ ಉಪ ಅಭಿಯನಾ (ಎಸ್.ಎಂ.ಎ.ಎಂ) ಕಾರ್ಯಕ್ರಮದಡಿ ಅಡಿಕೆ ಸುಲಿಯುವ ಯಂತ್ರ, ಅಡಿಕೆ ಗೊರಬಲು ಪಾಲಿಷತ್, ಅಡಿಕೆ ದೋಟಿ ಇತ್ಯಾದಿ ಯಂತ್ರಗಳಿಗೆ ಸಹಾಯಧನ ಲಭ್ಯವಿದೆ.
ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 15 ರೊಳಗಾಗಿ ಸಲ್ಲಿಸುವಂತೆ ತೋಟಗಾರಿಕೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

Horticulture Department ಹೆಚ್ಚಿನ ಮಾಹಿತಿಗಾಗಿ ಅಯಾ ತಾಲೂಕು ತೋಟಗಾರಿಕೆ ಕಚೇರಿ/ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...