Thursday, May 7, 2026
Thursday, May 7, 2026

Dr. Lata Nagendra ಮಕ್ಕಳಿಂದ ವೃದ್ಧರವರೆಗೆ ಒತ್ತಡದಲ್ಲಿ ಬದುಕುತ್ತಿದ್ದೇವೆ. ನಾವು ದೇಹ & ಮಾನಸಿಕ ಆರೋಗ್ಯ ಗಮನಿಸುತ್ತಿಲ್ಲ- ಡಾ.ಲತಾ ನಾಗೇಂದ್ರ

Date:

ನಿಮ್ಮ ಮನೆಯ ಚಿಕ್ಕ ಮಕ್ಕಳ ಆರೋಗ್ಯದ ಕುರಿತಾಗಿ ಯಾವುದೇ ರೀತಿಯಲ್ಲೂ ಪೋಷಕರು ನಿರ್ಲಕ್ಷ ಮಾಡಬಾರದು ಎಂದು ಎನ್’ಇಎಸ್ ಕಾರ್ಯದರ್ಶಿ ಸಿ.ಎನ್. ನಾಗರಾಜ್ ಸಲಹೆ ನೀಡಿದರು.

ಶಿವಮೊಗ್ಗದ ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ಶಿಕ್ಷಕರಿಗೆ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಇಂದಿನ ಹವಾಮಾನ, ಜೀವನ ಶೈಲಿಗಳು ಮೊದಲಿನಂತೆ ಇಲ್ಲ. ಎಲ್ಲವೂ ಬದಲಾವಣೆಯಾಗಿದ್ದು, ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ, ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಎಲ್ಲರೂ ಮಾಡಿಸಿಕೊಳ್ಳುವುದು ಅಗತ್ಯ. ಅನಾರೋಗ್ಯಗಳು ನಮ್ಮತ್ತ ಸುಳಿಯದಂತೆ ಜೀವನ ಶೈಲಿ, ಆಹಾರ ಶೈಲಿಗಳನ್ನು ಬದಲಾವಣೆ ಮಾಡಿಕೊಳ್ಳುವ ಜೊತೆಯಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕಕಿ ಡಾ|| ಲತಾ ನಾಗೇಂದ್ರ ಮಾತನಾಡಿ, ಇತ್ತೀಚೀನ ದಿನಗಳಲ್ಲಿ ಮಕ್ಕಳಿಂದ ವೃದ್ಧರವರಿಗೆ ಎ?? ವಯೋಮಾನದವರು ಒತ್ತಡದಲ್ಲಿ ಬದುಕುತ್ತಿದ್ದೇವೆ.. ನಮ್ಮ ದೇಹ ಹಾಗೂ ಮಾನಸಿನ ಆರೋಗ್ಯದ ಬಗ್ಗೆ ಗಮನ ಹರಿಸುವವರ ಸಂಖ್ಯೆ ಕಡಿಮೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಹೆಣ್ಣು ಮಕ್ಕಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಸ್ತನ ಕ್ಯಾನ್ಸರ್ ತಡೆಯಲು ನಿಯಮಿತ ತಪಾಸಣೆ, ಪರೀಕ್ಷೆ, ಸೂಕ್ತ ಮುಂಜಾಗ್ರತೆ ವಹಿಸಬೇಕು. ಇದಕ್ಕಾಗಿ ವೈದ್ಯರನ್ನು ನಿಯಮಿತವಾಗಿ ಭೇಟಿಯಾಗಿ ಪರೀಕ್ಷಿಸಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ನವೀನಾ ಪಾಯಸ್, ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಮ್ಯುನಿಟಿ ಮೆಡಿಸನ್ ಎಚ್’ಒಡಿ ಡಾ|| ಡಿ.ಆರ್. ಬಾಲು, ಡಾ| ಭಾಗ್ಯಶ್ರೀ, ಡಾ|| ಅನುಪಮಾ, ಡಾ|| ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...