Sunday, October 6, 2024
Sunday, October 6, 2024

Chikkamagaluru Police ಬೈಕ್ ಬಿಡಿಭಾಗ ಕದ್ದು ಮಾರುತ್ತಿದ್ದ ಖದೀಮರ ಸೆರೆ

Date:

Chikkamagaluru Police ಚಿಕ್ಕಮಗಳೂರು ಜಿಲ್ಲೆಯ ಬಸವನಹಳ್ಳಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಅಂತರ್ ಜಿಲ್ಲಾ ಕಳ್ಳರನ್ನು ಹಿಡಿದಿದ್ದು ಅವರಿಂದ ಮೂರು ಜಿಲ್ಲೆಗಳಲ್ಲಿ ಕಳ್ಳತನವಾಗಿದ್ದ ಒಟ್ಟು 17 ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾದ ಬೈಕ್‌ ಕಳ್ಳತನ ಪ್ರಕರಣ ಸಂಬಂಧ ವಿಶೇಷ ತಂಡ ರಚನೆ ಮಾಡಲಾಗಿತ್ತು.

ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಕಲೈಮಾರ್ ಮತ್ತು ಪಿಎಸ್ಐ ಬಾಬುದ್ದೀನ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಲಿಂಗಮೂರ್ತಿ, ಮಧಸೂಧನ್, ನಂಜಪ್ಪ, ಮಧುಕುಮಾರ್, ಪ್ರದೀಪ ಮತ್ತು ನವೀನ ಅವರ ತಂಡ ಇದೀಗ ಕಳ್ಳರ ಗ್ಯಾಂಗ್‌ನ್ನು ಹಿಡಿದಿದ್ದಾರೆ.
Chikkamagaluru Police ಈ ಸಂಬಂಧ ಮೂವರನ್ನ ಬಂಧಿಸಿರುವ ಪೊಲೀಸರು ರೂ. 8.5 ಲಕ್ಷ ಬೆಲೆಯ 17 ಬೈಕ್ ಗಳು, ರೂ. 2.15 ನಗದು ಮತ್ತು ರೂ. 50 ಸಾವಿರ ಮೌಲ್ಯದ ಬೈಕ್ ಬಿಡಿಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಶೇಷ ಅಂದರೆ ಆರೋಪಿಗಳು ಬೈಕ್‌ಗಳನ್ನು ಕದ್ದು ಅದನ್ನ ಗುಜರಿಗೆ ಹಾಕುತ್ತಿದ್ದರು. ವಾಹನಗಳ ಬಿಡಿಭಾಗಗಳನ್ನ ವಿಂಗಡಿಸಿ ಅವುಗಳನ್ನ ಮಾರಲಾಗುತ್ತಿತ್ತು.
ಆರೋಪಿಗಳು ಚಿಕ್ಕಮಗಳೂರು ನಗರದಲ್ಲಿ 22, ಕಡೂರು ಪಟ್ಟಣದಲ್ಲಿ 1, ತರೀಕೆರೆ ಪಟ್ಟಣದಲ್ಲಿ 1, ಶಿವಮೊಗ್ಗ ನಗರದಲ್ಲಿ 2, ಭದ್ರಾವತಿಯಲ್ಲಿ 2 ಹಾಗೂ ದಾವಣಗೆರೆಯಲ್ಲಿ 2 ಬೈಕ್’ಳನ್ನು ಕಳವು ಮಾಡಿದ್ದಾರೆ. ಅವುಗಳಲ್ಲಿ 17 ಬೈಕ್ ಸುಸ್ಥಿತಿಯಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...