Monday, August 3, 2026
Monday, August 3, 2026

Malnad Area Development Board ಕಾಲು ಸಂಕದಿಂದ ಜಾರಿಬಿದ್ದ ಮಹಿಳೆ ಸಾವಿಗೆ ಸ್ಪಂದಿಸಿದ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷಆರ್.ಎಂ.ಮಂಜುನಾಥ ಗೌಡ

Date:

Malnad Area Development Board ಹೊಸನಗರ ತಾಲ್ಲೂಕು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬೈಸೆ ಗ್ರಾಮದ ಚಿಕಳಿ ನಿವಾಸಿ ಶಶಿಕಲಾ ಎಂಬ ಮಹಿಳೆಯು ಅಡಿಕೆ ದಬ್ಬೆಯಲ್ಲಿ ನಿರ್ಮಾಣ ಮಾಡಿರುವ ಕಾಲುಸಂಕವನ್ನು ದಾಟುವಾಗ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ವಿಷಯ ತಿಳಿದು ತುಂಬಾ ನೋವಾಗಿದ್ದು, ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ನೀಡಲು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್.ಎಂ. ಮಂಜುನಾಥ ಗೌಡ ಅವರು ತಿಳಿಸಿದ್ದಾರೆ.
ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಮಲೆನಾಡು ಜಿಲ್ಲೆಗಳಲ್ಲಿ ಶಾಸಕರುಗಳು ಸೂಚಿಸುವ ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಮಂಡಳಿಯ 2024-25 ನೇ ಸಾಲಿನ ಯೋಜನೆಯಲ್ಲಿ ಹೆಚ್ಚಿನದಾಗಿ ಕಾಲುಸಂಕಗಳಿಗೆ ಪ್ರಾಮುಖ್ಯತೆ ನೀಡಿ ಕಾಮಗಾರಿಗಳನ್ನು ನೀಡುವಂತೆ ಶಾಸಕರುಗಳಿಗೆ ತಿಳಿಸಲಾಗಿರುತ್ತದೆ. ಮತ್ತು ಜುಲೈ ಅಂತ್ಯದೊಳಗೆ ಮಂಡಳಿಯ ಸರ್ವ ಸದಸ್ಯರ ಸಭೆಯನ್ನು ನಡೆಸಿ ಸದರಿ ವಿಷಯದ ಬಗ್ಗೆ ವಿವರವಾಗಿ ಚರ್ಚಿಸಿ ಅಗತ್ಯ ತಿರ್ಮಾನ ಕೈಗೊಳ್ಳಲಾಗುವುದು.
ಈಗಾಗಲೇ ಘಟನೆ ಸಂಭವಿಸಿದ ಸ್ಥಳದಲ್ಲಿ ಕಾಲುಸಂಕ ನಿರ್ಮಿಸುವ ಬಗ್ಗೆ ಎಲ್ಲ ಮಾಹಿತಿ ಪಡೆದಿದ್ದು ಮಂಡಳಿಯ ಅನುದಾನದಲ್ಲಿ Malnad Area Development Board ಕೊಡಲೇ ಕಾಲುಸಂಕ ನಿರ್ಮಿಸಲು ಕ್ರಮ ವಹಿಸಲಾಗುವುದು.
ಮಳೆಗಾಲದಲ್ಲಿ ಮಲೆನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಬೀಳುವುದರಿಂದ ಸಂಬಂಧಿಸಿದ ಶಾಸಕರುಗಳು ತಮ್ಮ ಅನುದಾನದಲ್ಲಿ ಕಾಮಗಾರಿಗಳುನ್ನು ಪ್ರಸ್ತಾಪಿಸುವಾಗ ಹೆಚ್ಚಿನ ಸಂಖ್ಯೆಯಲ್ಲಿ ಕಾಲುಸಂಕಗಳ ಕಾಮಗಾರಿಗಳನ್ನು ಕೈಗೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...