Thursday, December 18, 2025
Thursday, December 18, 2025

Malnad Area Development Board ಕಾಲು ಸಂಕದಿಂದ ಜಾರಿಬಿದ್ದ ಮಹಿಳೆ ಸಾವಿಗೆ ಸ್ಪಂದಿಸಿದ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷಆರ್.ಎಂ.ಮಂಜುನಾಥ ಗೌಡ

Date:

Malnad Area Development Board ಹೊಸನಗರ ತಾಲ್ಲೂಕು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬೈಸೆ ಗ್ರಾಮದ ಚಿಕಳಿ ನಿವಾಸಿ ಶಶಿಕಲಾ ಎಂಬ ಮಹಿಳೆಯು ಅಡಿಕೆ ದಬ್ಬೆಯಲ್ಲಿ ನಿರ್ಮಾಣ ಮಾಡಿರುವ ಕಾಲುಸಂಕವನ್ನು ದಾಟುವಾಗ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ವಿಷಯ ತಿಳಿದು ತುಂಬಾ ನೋವಾಗಿದ್ದು, ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ನೀಡಲು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್.ಎಂ. ಮಂಜುನಾಥ ಗೌಡ ಅವರು ತಿಳಿಸಿದ್ದಾರೆ.
ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಮಲೆನಾಡು ಜಿಲ್ಲೆಗಳಲ್ಲಿ ಶಾಸಕರುಗಳು ಸೂಚಿಸುವ ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಮಂಡಳಿಯ 2024-25 ನೇ ಸಾಲಿನ ಯೋಜನೆಯಲ್ಲಿ ಹೆಚ್ಚಿನದಾಗಿ ಕಾಲುಸಂಕಗಳಿಗೆ ಪ್ರಾಮುಖ್ಯತೆ ನೀಡಿ ಕಾಮಗಾರಿಗಳನ್ನು ನೀಡುವಂತೆ ಶಾಸಕರುಗಳಿಗೆ ತಿಳಿಸಲಾಗಿರುತ್ತದೆ. ಮತ್ತು ಜುಲೈ ಅಂತ್ಯದೊಳಗೆ ಮಂಡಳಿಯ ಸರ್ವ ಸದಸ್ಯರ ಸಭೆಯನ್ನು ನಡೆಸಿ ಸದರಿ ವಿಷಯದ ಬಗ್ಗೆ ವಿವರವಾಗಿ ಚರ್ಚಿಸಿ ಅಗತ್ಯ ತಿರ್ಮಾನ ಕೈಗೊಳ್ಳಲಾಗುವುದು.
ಈಗಾಗಲೇ ಘಟನೆ ಸಂಭವಿಸಿದ ಸ್ಥಳದಲ್ಲಿ ಕಾಲುಸಂಕ ನಿರ್ಮಿಸುವ ಬಗ್ಗೆ ಎಲ್ಲ ಮಾಹಿತಿ ಪಡೆದಿದ್ದು ಮಂಡಳಿಯ ಅನುದಾನದಲ್ಲಿ Malnad Area Development Board ಕೊಡಲೇ ಕಾಲುಸಂಕ ನಿರ್ಮಿಸಲು ಕ್ರಮ ವಹಿಸಲಾಗುವುದು.
ಮಳೆಗಾಲದಲ್ಲಿ ಮಲೆನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಬೀಳುವುದರಿಂದ ಸಂಬಂಧಿಸಿದ ಶಾಸಕರುಗಳು ತಮ್ಮ ಅನುದಾನದಲ್ಲಿ ಕಾಮಗಾರಿಗಳುನ್ನು ಪ್ರಸ್ತಾಪಿಸುವಾಗ ಹೆಚ್ಚಿನ ಸಂಖ್ಯೆಯಲ್ಲಿ ಕಾಲುಸಂಕಗಳ ಕಾಮಗಾರಿಗಳನ್ನು ಕೈಗೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...