Saturday, June 20, 2026
Saturday, June 20, 2026

Karnataka Land Reforms Act ಬರಗಾಲ ಬಂದರೂ ಈಗಿನ ಸರ್ಕಾರ ಪರಿಹಾರ ನೀಡಲಿಲ್ಲ- ಕೋಡಿಹಳ್ಳಿ ಚಂದ್ರಶೇಖರ್ ಆರೋಪ

Date:

Karnataka Land Reforms Act ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಪತ್ರಿಕಾಭವನದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರಕ್ಕೆ ಒಂದು ವರ್ಷವಾಗಿದೆ. ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಗ್ಯಾರಂಟಿಗಳಲ್ಲಿ ಮುಳುಗಿ ಅಭಿವೃದ್ಧಿಯನ್ನೇ ಕಡೆಗಾಣಿಸಿದ್ದಾರೆ. ಬರಗಾಲ ಬಂದರೂ ಅದಕ್ಕೆ ಪರಿಹಾರ ನೀಡಲಿಲ್ಲ. ಅದರ ಬದಲು ಬರಗಾಲದ ಸಂದರ್ಭದಲ್ಲಿ ತೆಲಂಗಾಣಕ್ಕೆ ಹೋಗಿ ಚುನಾವಣಾ ಪ್ರಚಾರದಲ್ಲಿ ಮುಳುಗಿದರು. ಕೇಂದ್ರ ಸರ್ಕಾರಕ್ಕೆ 36 ಸಾವಿರ ಕೋಟಿ ಪರಿಹಾರ ಕೇಳಿದ್ದರೂ ಕೂಡ ಕೇಂದ್ರ ಸರ್ಕಾರ ಕೇವಲ 3 ಸಾವಿರ ಕೋಟಿ ರೂ. ನೀಡಿ ಕೈ ಚೆಲ್ಲಿದೆ. ರಾಜ್ಯ ಸರ್ಕಾರ ರೈತರಿಗೆ 200 ಕೋಟಿ ರೂ. ಮಾತ್ರ ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ರೈತರನ್ನು ಕಡೆಗಾಣಿಸಿವೆ ಎಂದರು.
Karnataka Land Reforms Act ಕೇಂದ್ರ ಸರ್ಕಾರ ರೈತರ ಎಪಿಎಂಸಿ ಹಾಗೂ ಭೂಸುಧಾರಣಾ ಕಾಯ್ದೆ ರದ್ದು ಮಾಡಿದರೂ ಕೂಡ ರಾಜ್ಯ ಸರ್ಕಾರ ಮಾತ್ರ ರೈತರಿಗೆ ಮಾರಕವಾಗಿರುವ ಈ ಕಾನೂನುಗಳನ್ನು ರದ್ದು ಮಾಡದೇ ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರುತ್ತಿದೆ. ಚುನಾವಣೆಗೂ ಮುನ್ನ ರದ್ದು ಮಾಡುವ ಭರವಸೆ ನೀಡಿತ್ತು. ಆದರೆ, ಅದು ರದ್ದಾಗಿಲ್ಲ. ಭೂ ಸುಧಾರಣೆ ಕಾಯ್ದೆ ಪರಿಣಾಮವಾಗಿ ಸುಮಾರು 10 ಲಕ್ಷ ರೈತರು ತಮ್ಮ ಭೂಮಿ ಮಾರಿದ್ದಾರೆ. ಹಾಗೆಯೇ ಎಪಿಎಂಸಿ ಕಾಯ್ದೆಯಿಂದ ಕೃಷಿ ಮಾರುಕಟ್ಟೆಗೆ ಕಾರ್ಪೊರೇಟ್ ಕಂಪನಿಗಳು ನುಸುಳಿದ್ದಾರೆ. ಕೂಡಲೇ ಈ ಎರಡೂ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...