Wednesday, July 29, 2026
Wednesday, July 29, 2026

Muncipal Corporation ಶಿವಮೊಗ್ಗ ಹೊರವಲಯದ ಶಕ್ತಿಧಾಮ ಬಡಾವಣೆಯನ್ನ ನಗರ ಪಾಲಿಕೆ ಆಡಳಿತಕ್ಕೊಳಪಡಿಸಲು ನಾಗರೀಕರ ಆಗ್ರಹ

Date:

Muncipal Corporation ಶಿವಮೊಗ್ಗ ಗ್ರಾಮ ಪಂಚಾಯ್ತಿ ಅಧೀನದಲ್ಲಿರುವ ತಮ್ಮ ಬಡಾವಣೆಯನ್ನು ನಿಯಮಾನುಸಾರ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಂಡು ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ, ನಗರದ ಹೊರವಲಯ ಸಾಗರ ರಸ್ತೆಯಲ್ಲಿರುವ ಶಕ್ತಿಧಾಮ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘವು ಮಹಾನಗರ ಪಾಲಿಕೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಿದೆ.

ಶಕ್ತಿಧಾಮ ಲೇಔಟ್ ( ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ಆಡಳಿತದ ಅಧೀನದಲ್ಲಿದೆ. ಸದರಿ ಬಡಾವಣೆಯಲ್ಲಿ ಈಗಾಗಲೇ 200 ಕ್ಕೂ ಅಧಿಕ ಮನೆಗಳ ನಿರ್ಮಾಣ ಮಾಡಲಾಗಿದೆ. ದಿನದಿಂದ ದಿನಕ್ಕೆ ಬಡಾವಣೆ ಅಭಿವೃದ್ದಿಯಾಗುತ್ತಿದೆ. ಹೊಸ ಹೊಸ ಮನೆಗಳ ನಿರ್ಮಾಣವಾಗುತ್ತಿದೆ.
ಈ ಕಾರಣದಿಂದ ಬಡಾವಣೆಗೆ ಸಮರ್ಪಕ ಮೂಲಸೌಕರ್ಯ ( ಲಭ್ಯತೆ ಹಾಗೂ ನಿವಾಸಿಗಳ ಅನುಕೂಲಕ್ಕಾಗಿ, ಗ್ರಾಮ ಪಂಚಾಯ್ತಿ ಅಧೀನದಲ್ಲಿರುವ ಬಡಾವಣೆಯನ್ನು ನಿಯಮಾನುಸಾರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕು. ಈ ಮೂಲಕ ನಿವಾಸಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ನಿವಾಸಿಗಳು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಹೆಚ್ಚುತ್ತಿರುವ ಬೇಡಿಕೆ : ಸರಿಸುಮಾರು 27 ವರ್ಷಗಳಿಂದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಯಾಗಿಲ್ಲ. ಸದ್ಯ ನಗರದ ಹೊರವಲಯದ ಪ್ರದೇಶಗಳಲ್ಲಿ ಬೃಹತ್ ಬಡಾವಣೆಗಳು ಅಭಿವೃದ್ದಿಯಾಗಿವೆ. ಆದರೆ ಗ್ರಾಮ ಪಂಚಾಯ್ತಿ ಆಡಳಿತಗಳಿಂದ ಮೂಲಸೌಕರ್ಯ ಕಲ್ಪಿಸಲು ಆಗುತ್ತಿಲ್ಲ.
Muncipal Corporation ಇದರಿಂದ ನಾಗರೀಕರು ತೀವ್ರ ತೊಂದರೆ ಎದುರಿಸುವಂತಾಗಿದೆ. ಈ ಕಾರಣದಿಂದ ವೈಜ್ಞಾನಿಕ ರೀತಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕೆಂಬ ಬೇಡಿಕೆಗಳು ಹೊರವಲಯದ ಪ್ರದೇಶದ ಬಡಾವಣೆಗಳ ನಾಗರೀಕರಿಂದ ಕೇಳಿಬರಲಾರಂಭಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....