Thursday, October 3, 2024
Thursday, October 3, 2024

ಕನ್ನಡದ ಅಸ್ಮಿತೆ ಕೆಣಕಿದ ಎಂಇಎಸ್ ನಿಷೇಧಕ್ಕೆ ಒತ್ತಾಯ

Date:

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಹಾಗೂ ಬೆಳಗಾವಿಯಲ್ಲಿ ವೀರ ಸೇನಾನಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವುದರ ಜೊತೆಗೆ , ಈ ಕೃತ್ಯಕ್ಕೆ ಪ್ರಚೋದನೆ ನೀಡಿದವರ ವಿರುದ್ಧವೂ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲು ಸರ್ವಾನುಮತದ ನಿರ್ಣಯಕ್ಕೆ ಅಂಗೀಕಾರವಾಗಿದೆ.

ಬೆಳಗಾವಿ ವಿಚಾರದಲ್ಲಿ ಪದೇಪದೇ ಖ್ಯಾತೆ ತೆಗೆಯುವ ಮಹಾರಾಷ್ಟ್ರದ ಎಂಇಎಸ್ ಸಂಘಟನೆಯನ್ನು ಕಾನೂನು ಚೌಕಟ್ಟಿನಲ್ಲಿ ನಿಷೇಧಿಸಲು ಪರಿಶೀಲನೆ ನಡೆಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ.

“ಇದು ದೇಶದ್ರೋಹದ ಕೆಲಸ. ವಿಕೃತ ಮನಸ್ಸುಗಳು ಷಡ್ಯಂತ್ರ. ಇದರ ಹಿಂದೆ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಕುತಂತ್ರ ಅಡಗಿದೆ. ತರಲಾಗುವುದು” ಎಂದು ಬೊಮ್ಮಾಯಿ ಅವರು ಸದನದಲ್ಲಿ ತಿಳಿಸಿದ್ದಾರೆ.

ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಟ್ಟಿದ್ದು, ಶಿವಾಜಿ ಪ್ರತಿಮೆಗೆ ಮಸಿ ಬಳಿದದ್ದು ಹಾಗೂ ಬೆಳಗಾವಿಯಲ್ಲಿ ಸಂಗೊಳ್ಳಿರಾಯಣ್ಣನ ಪ್ರತಿಮೆ ಭಗ್ನಗೊಳಿಸಿದ್ದ ಪ್ರಕರಣಗಳನ್ನು ವಿರೋಧಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವಂತೆ ಪಕ್ಷಭೇದ ಮರೆತು ಒಕ್ಕೊರಲಿನಿಂದ ಎಲ್ಲಾ ರಾಜಕೀಯ ನಾಯಕರು ಕನ್ನಡದಲ್ಲಿ ಪಕ್ಷದ ನಾಯಕರು ಕನ್ನಡಕ್ಕಾಗಿ ಧ್ವನಿ ಎತ್ತಿದ್ದಾರೆ.

“ಒಕ್ಕೂಟ ವ್ಯವಸ್ಥೆ ಒಪ್ಪಿದ ನಂತರವೂ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾಲ್ಕೆರೆದು ಪದೇಪದೇ ಜಗಳಕ್ಕೆ ಬರುತ್ತಿದೆ. ಇಂಥವರು ಬುದ್ಧಿಹೀನರು, ಅವಿವೇಕಿಗಳು. ಕನ್ನಡಿಗರ ಸ್ವಾಭಿಮಾನ ಕೆಣಕುವ ಇಂತಹ ಪುಂಡರನ್ನು ಗಡಿಪಾರು ಮಾಡಬೇಕು” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಆಗ್ರಹಿಸಿದರು.

ರಾಜ್ಯದ ವಿವಿಧೆಡೆ ಎಂಇಎಸ್ ಹಾಗೂ ಶಿವಸೇನೆಯನ್ನು ನಿಷೇಧಿಸಬೇಕು ಎಂದು ಕನ್ನಡ ಪರ ರಕ್ಷಣಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

“ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟ ಸ್ವತಂತ್ರ ಸೇನಾನಿಗಳ ರಾಣಿ ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗಳನ್ನು ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಪ್ರತಿಷ್ಠಾಪಿಸುವ ಮೂಲಕ ಸೂರ್ಯ-ಚಂದ್ರ ಇರುವವರೆಗೆ ಅವರ ತ್ಯಾಗ ಬಲಿದಾನ ಶಾಶ್ವತವಾಗಿ ಇರುವಂತೆ ಸರ್ಕಾರ ನೋಡಿಕೊಳ್ಳಲಿದೆ” ಎಂದು ಬೊಮ್ಮಾಯಿ ಅವರು ಸದನದಲ್ಲಿ ಘೋಷಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...