Thursday, October 3, 2024
Thursday, October 3, 2024

Dr. K. Sudhakar ಸಂಸದ ಸುಧಾಕರ್ ಏರ್ಪಡಿಸಿದ್ದರೆಂದು ಹೇಳಲಾದ “ಎಣ್ಣೆ” ಬಾಟಲಿ ಸಮಾರಾಧನೆ ಬಗ್ಗೆ ಕಾಂಗ್ರೆಸ್ ಲೇವಡಿ

Date:

Dr. K. Sudhakar ನೂತನ ಬಿಜೆಪಿ ಸಂಸದ ಡಾ. ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಸಂಭ್ರಮಕ್ಕೆ ಭಾನುವಾರ (ಜು.07)ದಂದು ನೆಲಮಂಗಲದಲ್ಲಿ ‘ಬಿಜೆಪಿ-ಜೆಡಿಎಸ್’ ಬೆಂಬಲಿಗರಿಗೆ ಏರ್ಪಡಿಸಿದ್ದ ‘ಎಣ್ಣೆ ಪಾರ್ಟಿ’ ಕುರಿತು ಕಾಂಗ್ರೆಸ್ ಲೇವಡಿ ಮಾಡಿದೆ. ‘ಸಾರ್ವಜನಿಕರಿಗೆ ಎಚ್ಚರಿಕೆ! ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ’ ಎಂದು ಕಾಲೆಳೆದಿದೆ.

Dr. K. Sudhakar ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, “ಊಟನೂ ನಮ್ದು ಎಣ್ಣೆನೂ ನಮ್ದು ಎನ್ನುವ ಬಿಜೆಪಿ ಪಕ್ಷ
‘ಬಾರ್ ಜನತಾ ಪಾರ್ಟಿ’ ಎಂದು ಹೆಸರು ಬದಲಿಸಿಕೊಳ್ಳುವುದು ಸೂಕ್ತ! ಜನಸಾಮಾನ್ಯರನ್ನು ಮದ್ಯದ ದಾಸರಾಗಲು ಪ್ರೋತ್ಸಾಹಿಸುವ ಬಿಜೆಪಿಯಿಂದ ಜನರ ಉದ್ದಾರವನ್ನು ಬಯಸುವುದು ಮೂರ್ಖತನವಾಗುತ್ತದೆ. ಧರ್ಮ, ಸಂಸ್ಕೃತಿಗಳ ಬಗ್ಗೆ ಪುಂಖಾನುಪುಂಖವಾಗಿ ಮಾತಾಡುವ ಬಿಜೆಪಿಯ ಅಸಲಿ ಸಂಸ್ಕೃತಿ ಮಹಿಳಾ ಪೀಡನೆ, ಹೆಂಡದ ಸೇವನೆ! ಸಂಸದ ಸುಧಾಕರ್ ಅವರು ಜನರಿಗೆ ಮದ್ಯದ ಬಾಟಲಿಗಳನ್ನು ಹಂಚುವ ಮೂಲಕ ಬಿಜೆಪಿಯ ನೈಜ ಸಂಸ್ಕೃತಿಯನ್ನು ಬಯಲು ಮಾಡಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ, ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ” ಎಂದು ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...