Monday, August 3, 2026
Monday, August 3, 2026

Valmiki Development Corporation ವಾಲ್ಮೀಕಿ ನಿಗಮ ಬಹುಕೋಟಿ ಹಗರಣ.ಮಾಜಿ ಸಚಿವ ನಾಗೇಂದ್ರ & ಶಾಸಕ ಬಸನಗೌಡ ದದ್ದಲ್ ನಿವಾಸದ ಮೇಲೆ “ಇಡಿ” ದಾಳಿ

Date:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ವಾರ್ಡ್ ಸಂಖ್ಯೆ 2, ಆರ್‌ಆರ್ (ರಾಮ್ ರಹೀಮ್) ಕಾಲೊನಿಯಲ್ಲಿರುವ ದದ್ದಲ್ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.

ಬಳ್ಳಾರಿಯ ನೆಹರು ಕಾಲೊನಿಯಲ್ಲಿರುವ ಬಿ.ನಾಗೇಂದ್ರ ಮನೆ ಮೇಲೂ ಬೆಳಗ್ಗೆ 3ರಿಂದ 4 ಅಧಿಕಾರಿಗಳಿದ್ದ ತಂಡ ದಾಳಿ ಮಾಡಿದೆ. ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ‌ ಅಧಿಕಾರಿಗಳು, ನಾಗೇಂದ್ರರ ಮನೆಯಲ್ಲಿರುವ ದಾಖಲೆಗಳನ್ನೂ ಪರಿಶೀಲಿಸುತ್ತಿದ್ದಾರೆ.

Valmiki Development Corporation ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ, ಸಿಆರ್ಪಿಎಫ್‌ ಯೋಧರ ಸಹಕಾರದಿಂದ ದಾಳಿ ನಡೆಸಿದೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ರಾಮ್ಕ್ವ್ ಅಪಾರ್ಟ್ಮೆಂಟ್ನಲ್ಲಿರುವ ನಾಗೇಂದ್ರ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಅದೇ ರೀತಿ ಬಸವನಗೌಡ ದದ್ದಲ್ ನಿವಾಸವಲ್ಲದೆ, ಬೆಂಗಳೂರು ನಗರದ ಯಲಹಂಕ, ಕೋರಮಂಗಲ ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...