Friday, March 20, 2026
Friday, March 20, 2026

Chamber Of Commerce Shivamogga ಅಡ್ವಾನ್ಸ್ ಸ್ಕಿಲ್ ಅಕಾಡೆಮಿ ಕೇಂದ್ರದ ಪ್ರಾರಂಭೋತ್ಸವ

Date:

Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಸಂಘದ ವತಿಯಿಂದ ಬಹು ದಿನಗಳ ಕನಸು ಮತ್ತು ಸಂಘದ ಅಲ್ಲದೆ ವಿದ್ಯಾಭ್ಯಾಸವನ್ನು ಬಿಟ್ಟ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡಲು ಸಾದ್ಯವಾಗುವುದಲ್ಲದೆ ಇದರಿಂದ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಬರುವುದರೊಂದಿಗೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಈ ಅಕಾಡೆಮಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸುತ್ತಾ ಸಂಘದ ಸದಸ್ಯರುಗಳು, ನಗರದ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಡಳಿತ ಮಂಡಳಿ ವತಿಯಿಂದ ಈ ಮೂಲಕ ಕೋರಲಾಗಿದೆ.

ಮಾಜಿ ಅಧ್ಯಕ್ಷರುಗಳ ಆಶಯದಂತೆ ವಜ್ರ ಮಹೋತ್ಸವ ಆಚರಿಸುತ್ತಿರುವ ಈ ವರ್ಷ ಉನ್ನತ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರವನ್ನು ಸಂಘದ ಕಟ್ಟಡದಲ್ಲಿ ಪ್ರಾರಂಭಿಸಲು ಒಂದು ವರ್ಷದ ಪ್ರಯತ್ನದ ಫಲವಾಗಿ ಶಿವಮೊಗ್ಗ ಜಿಲ್ಲೆಯ ವಿದ್ಯಾವಂತ ನಿದುದ್ಯೋಗಿಗಳಿಗೆ ಕೌಶಲ್ಯ ನೀಡುವ ಮತ್ತು ಶಿವಮೊಗ್ಗ ಜಿಲ್ಲೆಯ ಕೈಗಾರಿಕೋಧ್ಯಮಿಗಳಿಗೆ ಮತ್ತು ವಾಣಿಜ್ಯೋಧ್ಯಮಿಗಳಿಗೆ ಪೂರಕವಾದ ಕೌಶಲ್ಯಯುಕ್ತ ಉದ್ಯೋಗಿಗಳನ್ನು ಒದಗಿಸುವ ನೆಲೆಯಲ್ಲಿ ದಿನಾಂಕ: ೧೪.೦೭.೨೦೨೪ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಕೇಂದ್ರದ ಪ್ರಾರಂಭೋತ್ಸವವನ್ನು ನೆರವೇರಿಸಲಾಗುತ್ತಿದೆ.

ತರಬೇತಿ ಕೇಂದ್ರದ ಮುಖ್ಯ ಉದ್ದೇಶ ಪ್ರಚಲಿತ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯದ ಕೊರತೆ ಎದ್ದು ಕಾಣುತ್ತದೆ ಶಿವಮೊಗ್ಗ ನಗರದಲ್ಲಿ ಉನ್ನತ ಮಟ್ಟದ ಕೌಶಲ್ಯ ತರಬೇತಿ ಕೇಂದ್ರದ ಅವಶ್ಯಕತೆಯನ್ನು ಮನಗಂಡು, ಶಿವಮೊಗ್ಗ ಜಿಲ್ಲೆಯ ಯುವ ವಿದ್ಯಾವಂತ ವಿದ್ಯಾರ್ಥಿಗಳಿಗೆ ಕೌಶಲ್ಯಯುತ ತರಬೇತಿ ಕೊಟ್ಟು ೨-೩ ವರ್ಷಗಳಲ್ಲಿ ಉದ್ಯೋಗದ ಭರವಸೆ ನೀಡುವಂತದ್ದಾಗಿದೆ ಹಾಗೂ ಕೌಶಲ್ಯ ಯುಕ್ತ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ದೊರೆತಾಗ ಶಿವಮೊಗ್ಗ ನಗರಕ್ಕೆ ಹೊಸ ಹೊಸ ಸ್ಟಾರ್ಟ ಆಪ್ ಕಂಪೆನಿಗಳು ಬರಲು ಅವಕಾಶವಾಗುತ್ತದೆ. ಈ ಮೂಲಕ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರ ಬೆಳೆಯಲು ಸಾದ್ಯವಾಗುತ್ತದೆ ಹಾಗೂ ಬೇಕಾದ ಕೆಲಸಕ್ಕೆ ಬೇಕಾದಂತಹ ಕೆಲಸಗಾರರು ಸಿಗುವಂತಹ ಕೆಲಸಗಾರರ ಸಮೂಹವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಜೊತೆಗೆ ಜಿಲ್ಲೆಯಲ್ಲಿರುವ ಪ್ರತಿಭಾವಂತ ಕೆಲಸಗಾರರನ್ನು ಶಿವಮೊಗ್ಗದಲ್ಲಿ ಉಳಿಸಿಕೊಳ್ಳುವಂತಹ ಸನ್ನಿವೇಶ ಸೃಷ್ಟಿಯಾಗಬೇಕು ಕೌಶಲ್ಯ ತರಬೇತಿಗಾಗಿ ಹಲವು ಕಂಪೆನಿಗ ಮತ್ತು ನಗರದ ಅನೇಕ ವಿದ್ಯಾಸಂಸ್ಥೆಗಳೊAದಿಗೆ ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿದೆ.

Chamber Of Commerce Shivamogga ಅಲ್ಲದೆ ವಿದ್ಯಾಭ್ಯಾಸವನ್ನು ಬಿಟ್ಟ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡಲು ಸಾದ್ಯವಾಗುವುದಲ್ಲದೆ ಇದರಿಂದ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಬರುವುದರೊಂದಿಗೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಈ ಅಕಾಡೆಮಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸುತ್ತಾ ಸಂಘದ ಸದಸ್ಯರುಗಳು, ನಗರದ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಡಳಿತ ಮಂಡಳಿ ವತಿಯಿಂದ ಈ ಮೂಲಕ ಕೋರಲಾಗಿದೆ.

ಕಾರ್ಯಕ್ರಮವನ್ನು ಸನ್ಮಾನ್ಯ ಶ್ರೀ ಮಧು ಬಂಗಾರಪ್ಪರವರು, ಮಾನ್ಯ ಶಾಲಾ ಶಿಕ್ಷಣ ಸಚಿವರು ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಲಿರುವರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಸನ್ಮಾನ್ಯ ಶ್ರೀ ಬಿ.ವೈ ರಾಘವೇಂದ್ರರವರು, ಮಾನ್ಯ ಸಂಸದರು, ಶಿವಮೊಗ್ಗ ಲೋಕಸಭಾಕ್ಷೇತ್ರ ಇವರು ಆಗಮಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಎಸ್. ರುದ್ರೇಗೌಡರು, ಸಂಘದ ಮಾಜಿ ಅಧ್ಯಕ್ಷರು ಹಾಗೂ ಮಾನ್ಯ ವಿಧಾನಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಖ್ಯಾತ ಮಕ್ಕಳ ವೈದ್ಯರು ಹಾಗೂ ವಿಧಾನಪರಿಷತ್ ಸದಸ್ಯರು ಆಗಮಿಸಲಿರುವರು ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀಯುತ ಎನ್. ಗೋಪಿನಾಥ್‌ರವರು ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...