Thursday, December 18, 2025
Thursday, December 18, 2025

Puttahalli Hitturu ಹಿಟ್ಟೂರಿನಲ್ಲಿ ಪ್ರವೇಶಾತಿ ಕ್ಷೀಣಿಸಿದ ಶಾಲೆಗೆ ಮತ್ತೆ ಕಾಯಕಲ್ಪ ನೀಡಿದ ಶಾಲಾ ಉಸ್ತುವಾರಿ ಸಮಿತಿ

Date:

Puttahalli Hitturu ಶಿವಮೊಗ್ಗ ತಾಲೂಕಿನ ಪುಟ್ಟಹಳ್ಳಿ ಹಿಟ್ಟೂರು ಗ್ರಾಮದಲ್ಲಿ 1 ರಿಂದ 7ನೇ ತರಗತಿಯವರೆಗೆ ಯಶಸ್ವಿಯಾಗಿ ಶಾಲೆ ನಡೆಯುತ್ತಿತ್ತು. ಆದರೆ ಇತ್ತೀಚಿನ ಖಾಸಗಿ ಶಾಲೆಗಳ ಹಾವಳಿಯಿಂದ ಗ್ರಾಮದ ಮಕ್ಕಳನ್ನು ಪೋಷಕರು ಖಾಸಗಿ ಶಾಲೆಗೆ ಸೇರಿಸಲು ಮುಂದಾದರು.

ಇದರಿಂದ ಶಾಲೆಯ ದಾಖಲಾತಿ ಕೇವಲ 12ಕ್ಕೆ ಇಳಿಯಿತು. ಕಾರಣ ಸದರಿ ಶಾಲೆಯನ್ನು ಪಕ್ಕದ ಗ್ರಾಮದ ಶಾಲೆಯಲ್ಲಿ ವಿಲೀನಗೊಳಿಸಲು ತೀರ್ಮಾನಿಸಿ ಕ್ರಮ ಆರಂಭವಾಗಿತ್ತು.

ಗ್ರಾಮದಲ್ಲಿ ಶಾಲೆ ಇಲ್ಲದಂತಾದ ಸಂದರ್ಭದಲ್ಲಿ ಶಾಲೆಯ ಉಸ್ತುವಾರಿ ಸಮಿತಿ ಗ್ರಾಮದ ಪೋಷಕರ ಮನವೊಲಿಸಿ ಖಾಸಗಿ ಶಾಲೆಗೆ ಹೋಗುವ ಮಕ್ಕಳನ್ನು ಮರಳಿ ನಮ್ಮೂರ ಶಾಲೆಗೆ ಸೇರಿಸಲು ಯಶಸ್ವಿಯಾಗಿದ್ದಾರೆ.

ಪೋಷಕರ ಮನವೊಲಿಸಿ ಶಾಲೆಯನ್ನು ಉಳಿಸಿಕೊಳ್ಳವಲ್ಲಿ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು
ಹರಸಾಹಸವನ್ನೆ ಪಟ್ಟಿದ್ದಾರೆ.
ಒಂದು ಮಗುವಿಗೆ 40 ಸಾವಿರ ಖರ್ಚು ಮಾಡುತ್ತಿದ್ದ ಪೋಷಕರೆಲ್ಲ ಸೇರಿ ಶಾಲೆಗೆ ಒಬ್ಬ ಸ್ಪೋಕನ್ ಇಂಗ್ಲೀಷ್ ಟೀಚರ್‌ನ್ನು ನೇಮಿಸಿಕೊಂಡಿದ್ದಾರೆ.

Puttahalli Hitturu ಜೊತೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಹ ಇನ್ನೊಬ್ಬ ಶಿಕ್ಷಕರನ್ನು ನಿಯೋಜಿಸಿದ್ದಾರೆ. ಈಗ ಒಟ್ಟು ೪ ಜನ ಶಿಕ್ಷಕರು ೨೫ ಮಕ್ಕಳಿಗೆ ಇಂಗ್ಲೀಷ್ ಕಲಿಕೆಯೊಂದಿಗೆ ಉತ್ತಮ ಶಿಕ್ಷಣವನ್ನು ನೀಡುತ್ತಿದ್ದಾರೆ. ಮತ್ತು ಉಚಿತ ಸಮವಸ್ತ್ರ, ಊಟ ಸೌಲಭ್ಯದೊಂದಿಗೆ ಮಕ್ಕಳ ಶಿಕ್ಷಣ ಉತ್ತಮವಾಗಿ ಸಾಗುತ್ತಿದೆ. ಇಂತಹ ಮಹತ್ಕಾರ್ಯವನ್ನು ಮಾಡಿದ ಶಾಲಾ ಉಸ್ತುವಾರಿ ಸಮಿತಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...