Thursday, June 18, 2026
Thursday, June 18, 2026

Arjun Guruji ಜುಲೈ 16 ರಂದು ಶಿವಮೊಗ್ಗದಲ್ಲಿ ಅರ್ಜುನ್ ಗುರೂಜಿ ಅವರಿಗೆ “ಗುರುವಂದನೆ” ಕಾರ್ಯಕ್ರಮ

Date:

Arjun Guruji ಶಿವಮೊಗ್ಗ ನಗರದ ಸೋಮಿನಕೊಪ್ಪ ರಸ್ತೆಯಲ್ಲಿರುವ ದೇವರಾಜ ಅರಸ ಬಡಾವಣೆಯಲ್ಲಿನ ಆರ್ಯವೈಶ್ಯ ಸಂಸ್ಕೃತಿ ಸದನದಲ್ಲಿ ಜುಲೈ 16ರಂದು ಸಂಜೆ 6ಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಆರ್‌ಜಿಎಸ್ ಕೇಟರಿಂಗ್, ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟದ ಆಶ್ರಯದಲ್ಲಿ ಮೈಸೂರಿನ ಪೂಜ್ಯ ಶ್ರೀ ಅರ್ಜುನ ಅವಧೂತ ಮಹಾರಾಜರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ ಹಾಗೂ ಲಲಿತ ಸಹಸ್ರ ನಾಮ ಪಾರಾಯಣ ಹಮ್ಮಿಕೊಳ್ಳಲಾಗಿದೆ. ಮೈಸೂರಿನ ಶ್ರೀ ಅರ್ಜುನ ಅವಧೂತ Arjun Guruji ಮಹಾರಾಜರು, ಹೊಸನಗರ ಮೂಲೆಗದ್ದೆ ಸದಾಶಿವ ಆಶ್ರಮದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಹಾಗೂ ಸಿದ್ದಾಪುರದ ದೈವಜ್ಞ ಬ್ರಾಹ್ಮಣ ಮಹಾಸಭಾದ ಶ್ರೀ ಸಂತೋಷ್ ಭಟ್ ಗುರೂಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುವರು. ಭಜನಾ ಪರಿಷತ್ ಮುಖ್ಯಸ್ಥ ಶಬರೀಶ್ ಕಣ್ಣನ್, ಸಮನ್ವಯ ಟ್ರಸ್ಟ್ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ ಅಧ್ಯಕ್ಷತೆ ವಹಿಸುವರು. ಗುರುವಂದನಾ ಕಾರ್ಯಕ್ರಮದ ನಂತರ ಪ್ರಸಾದ ವಿನಿಯೋಗ ಇರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...