Thursday, March 19, 2026
Thursday, March 19, 2026

Bharath Scouts and Guides ಸ್ಕೌಟ್ & ಗೈಡ್ಸ್ ನಲ್ಲಿ ಬದುಕುವ ಕಲೆ ಜೊತೆ ಆತ್ಮಸ್ಥೈರ್ಯ ಹೆಚ್ಚಿಸುವ ಶಕ್ತಿಯಿದೆ – ಶಕುಂತಲಾ ಚಂದ್ರಶೇಖರ್

Date:

Bharath Scouts and Guides ಆಡುತ್ತಾ ನಲಿಯುತ್ತಾ ಕಲಿಯುವುದು ಜೀವನ ಶಿಕ್ಷಣ. ಅದನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಅಳವಡಿಸಿಕೊಂಡು, ವಿದ್ಯಾಭ್ಯಾಸದ ಜೊತೆಗೆ ಇಂತಹ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಗೈಡ್ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಕಿವಿ ಮಾತು ಹೇಳಿದರು.

ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಜಿಲ್ಲಾ ಮಟ್ಟದ ನಿಪುಣ್ ಪರೀಕ್ಷಾ ಶಿಬಿರದ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಬದುಕುವ ಕಲೆಯ ಜೊತೆಗೆ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಶಕ್ತಿ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಇಂತಹ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮುಖ್ಯ ಆಯುಕ್ತೆ ಕೆ.ಪಿ.ಬಿಂದುಕುಮಾರ್, ಸ್ಕೌಟ್ ಮತ್ತು ಗೈಡ್ಸ್ ಎಂದರೆ ಶಿಸ್ತಿನ ಸಿಪಾಯಿಗಳ ತಂಡ ಕೊವಿಡ್ ನಂತಹ ವಿಷಮಕಾಲದಲ್ಲಿ ಜಿಲ್ಲಾಸಂಸ್ಥೆಯ ರೋವರ್ ತಂಡಗಳು ಆಹಾರ, ಔಷಧಿಯಂತಹ ಅಗತ್ಯ ವಸ್ತುಗಳನ್ನು ಶಿವಮೊಗ್ಗ ಭದ್ರಾವತಿ ವ್ಯಾಪ್ತಿಯಲ್ಲಿ ತಲುಪಿಸಿದನ್ನು ನಾವು ಇಂದು ಸ್ಮರಿಸಿಸಬೇಕು ಎಂದರು.

ಸ್ಥಾನಿಕಾ ಆಯುಕ್ತ ಕೆ.ರವಿ ಮಾತನಾಡಿ, ರೋವರ್ ರೇಂಜರ್ ಗಳು ತಮ್ಮ ಶಾಲೆಯಲ್ಲಿ ಹಾಗೂ ಗ್ರಾಮದಲ್ಲಿ ಮೊದಲು ಗಿಡ ನೆಡುವಂತ ಚಟುವಟಿಕೆಗಳಿಂದ ಪ್ರಾರಂಭಿಸಲು ತಿಳಿಸಿದರು. ಹಾಗೂ ಯುವಕರು ನಾಯಕತ್ವಗುಣ ಬೆಳೆಸಿಕೊಳ್ಳಬೇಕೆಂದು ಕರೆ ಕೊಟ್ಟರು.

Bharath Scouts and Guides ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಹೆಚ್.ಪರಮೇಶ್ವರ್, ಖಜಾಂಚಿ ಚೂಡಾಮಣಿ ಪವಾರ್, ಜಂಟಿಕಾರ್ಯದರ್ಶಿ ಲಕ್ಷ್ಮಿ ಕೆ ರವಿ, ಕೇಂದ್ರ ಸ್ತಾನಿಕಾಯುಕ್ತ ಜಿ ವಿಜಯ ಕುಮಾರ್, ಕೆ.ರವಿ. ತರಬೇತಿ ತಂಡದ ನಾಯಕ ರಾಜೇಶ್ ವಿ ಅವಲಕ್ಕಿ, ಸಹನಾಯಕ ಎಂ.ಗಣಪತಿ, ಸಿ.ಎಂ.ಪರಮೇಶ್ವರಯ್ಯ, ಚಂದ್ರಶೇಖರ್, ಮಲ್ಲಿಕಾರ್ಜುನಕಾನೂರ್, ತರಬೇತಿ ತಂಡದ ನಾಯಕಿ ಕಾತ್ಯಾಯಿನಿ, ಭಾರತಿ ಸಿಂಗಾಡೆ, ಶಾಂತಮ್ಮ.ಎಂ.ಎಲ್, ವಿವಿಧ ಕಾಲೇಜುಗಳ ಉಪನ್ಯಸಕರು ಹಾಗೂ 300 ಕ್ಕೂ ಅಧಿಕ ವಿದ್ಯಾರ್ಥಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಕಾತ್ಯಾಯಿನಿ ಶಿಬಿರದ ಮಾಹಿತಿಯನ್ನು ತಿಳಿಸಿದರು. ರಾಜೇಶ್ ಅವಲಕ್ಕಿ ನಿರೂಪಿಸಿ, ಹೆಚ್.ಶಿವಶಂಕರ್ ಸ್ವಾಗತಿಸಿ, ಲಕ್ಷ್ಮಿ ಕೆ ರವಿ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...