Sunday, May 17, 2026
Sunday, May 17, 2026

B.Y. Vijayendra ಮೂಡಾಹಗರಣ ದಾಖಲೆಗೆ ಒತ್ತಾಯಿಸಿ ಬಿ.ವೈ. ವಿಜಯೇಂದ್ರ ನಿವಾಸಕ್ಕೆ ಕಾಂಗ್ರೆಸ್ ಘೇರಾವ್ ಯತ್ನ,ತಡೆದ ಪೊಲೀಸ್

Date:

B.Y. Vijayendra ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ಮುಡಾದಿಂದ 48 ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಿವಾಸಕ್ಕೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದ್ದು, ಆದರೆ ರಸ್ತೆಯಲ್ಲೇ ತಡೆದ ಪೊಲೀಸರು ವಾಪಸ್ ಕಳಿಸಿದ್ದಾರೆ. 48 ಸೈಟ್‌ ಹಂಚಿಕೆ ಆರೋಪ್​ ಕೇಸ್​​ ಬಗ್ಗೆ ತನಿಖೆಗೆ ಕೋರಿ 2011ರಲ್ಲಿ ಸಭಾಪತಿಗೆ ಬಿಎಸ್​ ಯಡಿಯೂರಪ್ಪ ದಾಖಲೆ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಮುಖಂಡರು ಇದರ ಚರ್ಚೆಯನ್ನು ಮುಂದಿವರೆಸಲು ವಿಜಯೇಂದ್ರಗೆ ಆಗ್ರಹಿಸಿದ್ದರು. ಈ‌ ಹಿನ್ನೆಲೆಯಲ್ಲಿ ಈ ಆರೋಪಕ್ಕೆ ಸಂಬಂಧಿಸಿದ ದಾಖಲೆ ಕೊಡಲು ವಿಜಯೇಂದ್ರ ನಿವಾಸಕ್ಕೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಮತ್ತು ಯುವ ಕಾಂಗ್ರೆಸ್ ಮುಖಂಡ ಮನೋಹರ್​​ ಆಗಮಿಸಿದ್ದರು. ಆದರೆ ನಿವಾಸದ ಬಳಿ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದಾರೆ.
ಬಿಜೆಪಿಗೆ ರಮೇಶ್​ ಬಾಬು ಪ್ರಶ್ನೆ
B.Y. Vijayendra ಸುದ್ದಿಗೋಷ್ಠಿ ಮಾಡಿದ್ದ ವಿಧಾನಪರಿಷತ್​ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಮುಡಾ ಸೈಟ್​ ಹಂಚಿಕೆಯಲ್ಲಿ, ಮಾಜಿ ಪ್ರಧಾನಿ ಹೆಚ್​ಡೆ ದೇವೆಗೌಡರು ತಮ್ಮ ಕುಟುಂಬ ಸದಸ್ಯರಿಗೆ 48 ನಿವೇಶನಗಳನ್ನು ಹಂಚಿಕೆ ಆರೋಪ ಮಾಡಿದ್ದು, ಬಿಜೆಪಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.
ಬಿಎಸ್​ ಯಡಿಯೂರಪ್ಪ 2011ರಲ್ಲಿ ಸಭಾಪತಿಗೆ ಸಲ್ಲಿಸದ ದಾಖಲೆಗಳ ಪ್ರಕಾರ ಹೆಚ್​ಡಿ ಕುಮಾರಸ್ವಾಮಿ ಅವರಿಗೆ 300\200 ಹಂಚಿಕೆ ಬಗ್ಗೆ ತಿಳಿಸಿದ್ದಾರೆ. ಇದನ್ನು ಪರಿಷತ್ತಿನ ಕಲಾಪದಲ್ಲಿ ಕೂಡ ಪ್ರಸ್ತಾಪಿಸಲಾಗಿದೆ. ಈ ಬಗ್ಗೆ ಬಿಜೆಪಿ ಅವರ ನಿಲುವೇನು ಎಂದು ಪ್ರಶ್ನಿಸಿದ್ದಾರೆ.
ಮುಡಾ ಹಗರಣದಲ್ಲಿ ಯಾರೆಲ್ಲಾ ಬಿಜೆಪಿ ನಾಯಕರು ಎಷ್ಟು ನಿವೇಶಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಲಿ. ಏಕೆಂದರೆ ಬಿಜೆಪಿ ಅಧಿಕಾರಿದಲ್ಲಿ ಇದ್ದಾಗಲೇ ಮೈಸೂರಿನ ಮುಡಾದಲ್ಲಿ ಹೆಚ್ಚು ಹೆಚ್ಚು ಹಗರಣಗಳು ನಡೆದಿವೆ ಎಂದು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...