Monday, July 13, 2026
Monday, July 13, 2026

Karnataka Working Journalists Association ಐದು ಸಾವಿರ ನಿವೇಶನ ವಿತರಿಸುವ ಗುರಿ ನನ್ನದು- ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್

Date:

Karnataka Working Journalists Association ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಪ್ರೆಸ್ ಟ್ರಸ್ಟ್, ಜಿಲ್ಲಾಡಳಿತ ಮತ್ತು ಸೂಡಾ ಇವರ ಸಂಯುಕ್ತಾಶ್ರಯದಲ್ಲಿ ಸೋಮಿನಕೊಪ್ಪದ ನ್ಯಾಯಾಂಗ ಬಡಾವಣೆಯಲ್ಲಿ ಒಂದು ಸಾವಿರ ಸಸಿ ನಡುವ ಕಾರ್ಯಕ್ರಮಕ್ಕೆ ಸೂಡ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಚಾಲನೆ ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರಲ್ಲಿ ಎರಡು ವರ್ಗವಿದೆ ಒಂದು ನಕಾರಾತ್ಮಕ ಮತ್ತೊಂದು ಸಕರಾತ್ಮಕ ಸುದ್ದಿ ಮಾಡುವವರಿದ್ದಾರೆ.

ಇವರೆಲ್ಲರೂ ಸುದ್ದಿ ಮಾಡುವ ಮೂಲಕ ನೊಂದವರ ಪರವಿದ್ದಾರೆ. ನಾನು ಅಧ್ಯಕ್ಷನಾಗಿ ಬಂದ ನಂತರ ಐದು ಸಾವಿರ ನಿವೇಶನ ಮಾಡುವ ಗುರಿ ಹೊಂದಿದ್ದೇನೆ. ಆದರೆ ರೈತರಿಗೆ ಮಾರುಕಟ್ಟೆಯ ದರದಲ್ಲಿ ಪರಿಹಾರ ನೀಡಲಾಗುತ್ತಿಲ್ಲ. ಹಾಗಾಗಿ ನಿವೇಶನ ಮಾಡುವುದೇ ಕಷ್ಟವಾಗಿದೆ ಎಂದರು.

ಗೋಪಿಶೆಟ್ಟಿಕೊಪ್ಪದಲ್ಲಿ ಡಿನೋಟಿಫೈ ಮಾಡುವ ಹುನ್ಬಾರ ನಡೆದಿದೆ. ಅದನ್ನ ಸೂಡ ತಡೆಹಿಡಿದು ಸರ್ಕಾರಕ್ಕೆ ಡಿನೋಟಿ ಫೈ ಮಾಡದಂತೆ ಪತ್ರ ಬರೆಯಲಾಗಿದೆ.. ಸೂಡ ನಿವೇಶನ ಹಂಚಿಕೆಯಲ್ಲಿಯೇ ಪತ್ರಕರ್ತರಿಗೆ ಕಡಿಮೆ ಪರ್ಸೆಂಟೇಜ್ ನಲ್ಲಿ ಹಂಚಲಾಗುವುದು ಎಂದರು.

ಸೂಡಾ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ನ್ಯಾಯಾಂಗ ಇಲಾಖೆ ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ಕಾರ್ಯದರ್ಶಿ ಪಾರ್ವತಮ್ಮ, ಶಿವಮೊಗ್ಗ ಟ್ರಸ್ಟ್ ಕಾರ್ಯದರ್ಶಿ ನಾಗರಾಜ್ ನೆರಿಗೆ, ಹಿರಿಯ ಪತ್ರಕರ್ತರಾದ ಗೋಪಾಲ ಯಡಗೆರೆ, ಶ್ರೀಕಾಂತ್ ಕಾಮತ್, ಮಾರ್ತಾಧಿಕಾರಿ ಮಾರುತಿ, ಸಂಘದ ಉಪಾಧ್ಯಕ್ಷರಾದ ವೈದ್ಯನಾಥ್, ಹಾಲಸ್ವಾಮಿ, ನಗರ ಕಾರ್ಯದರ್ಶಿ ಕೆ.ಆರ್.ಸೋಮನಾಥ್ ಉಪಸ್ಥಿತರಿದ್ದರು.

Karnataka Working Journalists Association ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ವಿ.ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಜಿಲ್ಲಾ ಕಾರ್ಯದರ್ಶಿ ವಿ.ಟಿ.ಅರುಣ್ ಸ್ವಾಗತಿಸಿದರು. ಉಪಾಧ್ಯಕ್ಷ ದೀಪಕ್ ಸಾಗರ್ ನಿರೂಪಿಸಿದರು.

ವೇದಿಕೆ ಕಾರ್ಯಕ್ರಮದ ನಂತರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...