Monday, February 2, 2026
Monday, February 2, 2026

Chamber Of Commerce ವಿತರಕರಿಗಾಗಿ ಟ್ರೇಡ್ ಲೈಸನ್ಸ್ , ಫುಡ್ ಲೈಸನ್ಸ್ ಇತ್ಯಾದಿ ಮಾದರಿ ಮೇಳ ವ್ಯವಸ್ಥೆ ನಮ್ಮ ಗುರಿ- ಎಂ.ಸಿ.ದೇವರಾಜ್

Date:

Chamber Of Commerce ವಿತರಕರ ಹಿತಕ್ಕಾಗಿ ಕೆಲವು ಕೆಲಸಗಳನ್ನು ಮಾಡಲು ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದೇವೆ. ಕಂಪನಿ ಮತ್ತು ವಿತರಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವುದು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಶಯಗಳಿಗೆ ಸ್ಪಂದಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಹೊಸ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ದೇವರಾಜ್.ಎಂ.ಸಿ ಭರವಸೆ ನೀಡಿದರು.

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಹೊಸ ಆಡಳಿತ ಮಂಡಳಿಗೆ ಆಯ್ಕೆ ಆದ ನಿರ್ದೇಶಕರುಗಳು ಸಭೆ ಸೇರಿದ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಮಾತನಾಡಿದ ಅವರು, ಟ್ರೇಡ್ ಲೈಸನ್ಸ್ ಮೇಳ, ಫುಡ್ ಲೈಸನ್ಸ್ ಮೇಳ, ಎಪಿಎಂಸಿ ಮಾದರಿ ನಮ್ಮ ಎಲ್ಲಾ ವಿತರಕರಿಗೂ ನಗರದಲ್ಲಿ ಒಂದೇ ಕಡೆ ವಿಶಾಲವಾದ ಜಾಗ ಪಡೆಯಲು ಪ್ರಯತ್ನಿಸಲಾಗುವುದು ಎಂದರು.

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಹೊಸ ಆಡಳಿತ ಮಂಡಳಿಗೆ ಆಯ್ಕೆ ಆದ ನಿರ್ದೇಶಕರುಗಳು ಸಭೆ ಸೇರಿ, ಅಧ್ಯಕ್ಷ ಸ್ಥಾನವನ್ನು ದೇವರಾಜ್.ಎಂ.ಸಿ, ಉಪಾಧ್ಯಕ್ಷ ಸ್ಥಾನವನ್ನು ಬದರಿನಾಥ್.ಬಿ.ಆರ್,
ಕಾರ್ಯದರ್ಶಿ ಸ್ಥಾನವನ್ನು ಗಿರೀಶ್ ಒಡೆಯರ್, ಸಹಕಾರ್ಯದರ್ಶಿ ಸ್ಥಾನವನ್ನು ಅರವಿಂದ್ ರಾವ್.ಎಸ್.ವಿ, ಖಜಾಂಚಿ ಸ್ಥಾನವನ್ನು ಚಂದ್ರಶೇಖರ್.ಕೆ.ಕೆ, ನಿರ್ದೇಶಕರ ಸ್ಥಾನಗಳಿಗೆ ಮೋಹನ್ ಕುಮಾರ್, ಮೊಹಮ್ಮದ್ ಇಕ್ಬಾಲ್, ರಾಘವೇಂದ್ರ.ವೈ.ಎಂ, ಕುಮಾರ್.ಎ.ಎಂ, ಮಹಾರುದ್ರ.ಕೆ.ವಿ ಇವರು ಜವಾಬ್ದಾರಿಗಳನ್ನು ಹಂಚಿಕೊಂಡಿದ್ದಾರೆ.

ಇದೇ ವೇಳೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜಿಲ್ಲಾ ವಿತರಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ದೇವರಾಜ್, ಕಾರ್ಯದರ್ಶಿ ಹಾಗೂ ನೂತನ ಕಾರ್ಯ ಮಾಡಲು ಅಭಿನಂದಿಸಲಾಯಿತು.

Chamber Of Commerce ಇದೇ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಶಿವರಾಜ್ ಉಡುಗಣಿ, ಮಾಜಿ ಕಾರ್ಯದರ್ಶಿ ಮೋಹನ್.ಕೆ.ಎಸ್, ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹಕಾರ್ಯದರ್ಶಿ ಜಿ.ವಿಜಯಕುಮಾರ್, ವಿತರಕರ ಸಂಘದ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...