Saturday, December 6, 2025
Saturday, December 6, 2025

Gajanur Dam ಎಡಬಿಡದ ಮಳೆಯಿಂದಾಗಿ ಗಾಜನೂರು ಜಲಾಶಯಕ್ಕೆ ಹೆಚ್ಚುತ್ತಿರುವ ನೀರಿನ ಒಳಹರಿವು

Date:

Gajanur Dam ನಾಡಿನ ಜೀವ ನದಿಗಳಲ್ಲೊಂದಾದ ತುಂಗಾ ನದಿ ಪ್ರಸ್ತುತ ಮೈದುಂಬಿ ಹರಿಯುತ್ತಿದೆ. ಜೊತೆಗೆ ಪ್ರವಾಹದ ಭೀತಿ (ಸೃಷ್ಟಿಸಿದೆ. ಕೆಲವೆಡೆ ನದಿಪಾತ್ರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
ಈ ನಡುವೆ ತೀರ್ಥಹಳ್ಳಿ ಆಗುಂಬೆ , ಶೃಂಗೇರಿ ಸುತ್ತಮುತ್ತ ಭಾರೀ ಮಳೆ ಮುಂದುವರಿದಿದೆ. ಇದರಿಂದ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯದ ಒಳಹರಿವಿನಲ್ಲಿ ನಿರಂತರ ಹೆಚ್ಚಳ ಕಂಡುಬರಲಾರಂಭಿಸಿದೆ.
ಗುರುವಾರ ಬೆಳಿಗ್ಗೆಯ ಮಾಹಿತಿಯಂತೆ ತುಂಗಾ ಜಲಾಶಯಕ್ಕೆ 71,484 ಕ್ಯೂಸೆಕ್ ಒಳಹರಿವಿದೆ ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ಹೊರ ಹರಿಸಲಾಗುತ್ತಿದೆ
Gajanur Dam ಡ್ಯಾಂನಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಶಿವಮೊಗ್ಗ ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯು ಕಳೆದ ಮೂರು ದಿನಗಳಿಂದ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಡ್ಯಾಂನಿಂದ ಬಿಡುವ ನೀರಿನಲ್ಲಿ ಹೆಚ್ಚಳವಾದರೆ, ನಗರದ ನದಿಯಂಚಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...