Friday, October 4, 2024
Friday, October 4, 2024

VISL Township of Bhadravati ಪೌರಕಾರ್ಮಿಕನನ್ನ ಮ್ಯಾನ್ ಹೋಲ್ ನಲ್ಲಿ ಇಳಿಸಿ ಕೆಲಸ, ವಿಐಎಸ್ಎಲ್ ಟೌನ್ ಶಿಪ್ ವಿರುದ್ಧ ಕ್ರಮಕ್ಕೆ ಒತ್ತಾಯ

Date:

VISL Township of Bhadravati ಭದ್ರಾವತಿಯ ವಿಐಎಸ್‍ಎಲ್ ಟೌನ್ ಶಿಪ್‍ನ ಯು.ಜಿ.ಡಿ. ಮ್ಯಾನ್‍ಹೋಲ್‍ನಲ್ಲಿ ಪೌರಕಾರ್ಮಿಕನನ್ನು ಇಳಿಸಿ ಪೌರಕಾರ್ಮಿಕರನ್ನು ಅಪಮಾನಗೊಳಿಸಿರುವ ಕಾಖಾನೆಯ ವಿಐಎಸ್‍ಎಲ್ ಟೌನ್‍ಶಿಪ್‍ನ ಡಿಜಿಎಂ ಮೋಹನ್ ಶೆಟ್ಟಿ ಹಾಗೂ ಸೂಪರ್ ವೈಸರ್ ಓಂಕಾರಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಭದ್ರಾವತಿ ಹಾಗೂ ಶಿವಮೊಗ್ಗದ ಪೌರ ಕಾರ್ಮಿಕರು ಆಗ್ರಹಿಸಿದ್ದಾರೆ.

ಭದ್ರಾವತಿ ವಾರ್ಡ್ ನಂ. 26ರ ವಿಐಎಸ್‍ಎಲ್ ಟೌನ್‍ಶಿಪ್‍ನಲ್ಲಿ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಬ್ರಮಣಿ ಬಿನ್ ಜಯರಾಮ್, ಕುಮಾರ ಜಿ. ಬಿನ್ ಗೋವಿಂದ, ಆರ್. ಮಹದೇವ ಬಿನ್ ರಾಮಯ್ಯ ಇವರುಗಳು ಮ್ಯಾನ್ ಹೋಲ್‍ನಲ್ಲಿ ಇಳಿದು ಸ್ವಚ್ಛಗೊಳಿಸುವಂತೆ ಡಿಜಿಎಂ ಮೋಹನ್ ಶೆಟ್ಟಿ ಹಾಗೂ ಸೂಪರ್‍ವೈಸರ್ ಓಂಕಾರಪ್ಪ ತಿಳಿಸಿದ್ದರಿಂದ ಈ ಅಮಾನವೀಯ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

VISL Township of Bhadravati ಮ್ಯಾನ್ ಹೋಲ್ ನಲ್ಲಿ ಯಾವುದೇ ಮಾನವ ಶಕ್ತಿಯನ್ನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಬಳಸಿಕೊಳ್ಳುವಂತಿಲ್ಲ ಎಂಬ ಆದೇಶವಿದ್ದರೂ ಅದನ್ನು ಧಿಕ್ಕರಿಸಿ ಈ ಇಬ್ಬರು ಅಧಿಕಾರಿಗಳು ದರ್ಪ ಮೆರೆದಿದ್ದಾರೆ. ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳದೇ ಪೌರಕಾರ್ಮಿಕರನ್ನು ಯುಜಿಡಿ ಮ್ಯಾನ್ ಹೋಲ್ ನಲ್ಲಿ ಇಳಿಸುವ ಮೂಲಕ ಇಡೀ ಪೌರಕಾರ್ಮಿಕ ಸಮುದಾಯಕ್ಕೇ ಅಪಮಾನವೆಸಗಿದ್ದಾರೆ.
ಕೂಡಲೇ ಪೌರಕಾರ್ಮಿಕ ವಿರೋಧಿಗಳಾದ ಈ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸಿ, ಬಂಧಿಸಬೇಕು. ಅಪಮಾನಕ್ಕೊಳಗಾದ ಪೌರಕಾರ್ಮಿಕರಿಗೆ ಸೂಕ್ತ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ಭದ್ರಾವತಿ ಪೌರಾಯುಕ್ತರಿಂದ ನ್ಯೂಟೌನ್ ಪೊಲೀಣ್ ಠಾಣೆಗೆ ದೂರು ದಾಖಲಿಸುವಂತೆ ಪತ್ರ ಬರೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...