Thursday, December 18, 2025
Thursday, December 18, 2025

VISL Township of Bhadravati ಪೌರಕಾರ್ಮಿಕನನ್ನ ಮ್ಯಾನ್ ಹೋಲ್ ನಲ್ಲಿ ಇಳಿಸಿ ಕೆಲಸ, ವಿಐಎಸ್ಎಲ್ ಟೌನ್ ಶಿಪ್ ವಿರುದ್ಧ ಕ್ರಮಕ್ಕೆ ಒತ್ತಾಯ

Date:

VISL Township of Bhadravati ಭದ್ರಾವತಿಯ ವಿಐಎಸ್‍ಎಲ್ ಟೌನ್ ಶಿಪ್‍ನ ಯು.ಜಿ.ಡಿ. ಮ್ಯಾನ್‍ಹೋಲ್‍ನಲ್ಲಿ ಪೌರಕಾರ್ಮಿಕನನ್ನು ಇಳಿಸಿ ಪೌರಕಾರ್ಮಿಕರನ್ನು ಅಪಮಾನಗೊಳಿಸಿರುವ ಕಾಖಾನೆಯ ವಿಐಎಸ್‍ಎಲ್ ಟೌನ್‍ಶಿಪ್‍ನ ಡಿಜಿಎಂ ಮೋಹನ್ ಶೆಟ್ಟಿ ಹಾಗೂ ಸೂಪರ್ ವೈಸರ್ ಓಂಕಾರಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಭದ್ರಾವತಿ ಹಾಗೂ ಶಿವಮೊಗ್ಗದ ಪೌರ ಕಾರ್ಮಿಕರು ಆಗ್ರಹಿಸಿದ್ದಾರೆ.

ಭದ್ರಾವತಿ ವಾರ್ಡ್ ನಂ. 26ರ ವಿಐಎಸ್‍ಎಲ್ ಟೌನ್‍ಶಿಪ್‍ನಲ್ಲಿ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಬ್ರಮಣಿ ಬಿನ್ ಜಯರಾಮ್, ಕುಮಾರ ಜಿ. ಬಿನ್ ಗೋವಿಂದ, ಆರ್. ಮಹದೇವ ಬಿನ್ ರಾಮಯ್ಯ ಇವರುಗಳು ಮ್ಯಾನ್ ಹೋಲ್‍ನಲ್ಲಿ ಇಳಿದು ಸ್ವಚ್ಛಗೊಳಿಸುವಂತೆ ಡಿಜಿಎಂ ಮೋಹನ್ ಶೆಟ್ಟಿ ಹಾಗೂ ಸೂಪರ್‍ವೈಸರ್ ಓಂಕಾರಪ್ಪ ತಿಳಿಸಿದ್ದರಿಂದ ಈ ಅಮಾನವೀಯ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

VISL Township of Bhadravati ಮ್ಯಾನ್ ಹೋಲ್ ನಲ್ಲಿ ಯಾವುದೇ ಮಾನವ ಶಕ್ತಿಯನ್ನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಬಳಸಿಕೊಳ್ಳುವಂತಿಲ್ಲ ಎಂಬ ಆದೇಶವಿದ್ದರೂ ಅದನ್ನು ಧಿಕ್ಕರಿಸಿ ಈ ಇಬ್ಬರು ಅಧಿಕಾರಿಗಳು ದರ್ಪ ಮೆರೆದಿದ್ದಾರೆ. ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳದೇ ಪೌರಕಾರ್ಮಿಕರನ್ನು ಯುಜಿಡಿ ಮ್ಯಾನ್ ಹೋಲ್ ನಲ್ಲಿ ಇಳಿಸುವ ಮೂಲಕ ಇಡೀ ಪೌರಕಾರ್ಮಿಕ ಸಮುದಾಯಕ್ಕೇ ಅಪಮಾನವೆಸಗಿದ್ದಾರೆ.
ಕೂಡಲೇ ಪೌರಕಾರ್ಮಿಕ ವಿರೋಧಿಗಳಾದ ಈ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸಿ, ಬಂಧಿಸಬೇಕು. ಅಪಮಾನಕ್ಕೊಳಗಾದ ಪೌರಕಾರ್ಮಿಕರಿಗೆ ಸೂಕ್ತ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ಭದ್ರಾವತಿ ಪೌರಾಯುಕ್ತರಿಂದ ನ್ಯೂಟೌನ್ ಪೊಲೀಣ್ ಠಾಣೆಗೆ ದೂರು ದಾಖಲಿಸುವಂತೆ ಪತ್ರ ಬರೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...