Wednesday, March 25, 2026
Wednesday, March 25, 2026

Shivamogga Weather Forecast ಭಾರಿಮಳೆ, ಸಾಗರ, ಶಿಕಾರಿಪುರಗಳಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್

Date:

Shivamogga Weather Forecast ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ನದಿ ಮತ್ತು ಹಳ್ಳಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಎಸ್ ಪಿ ಮಿಥುನ್‌ಕುಮಾರ್ ನೆರೆಪೀಡಿತ ಪ್ರದೇಶಗಳಾದ ಶಿಕಾರಿಪುರದ ಅಂಜನಾಪುರ, ಕೊಟ್ಟ, ಕೊಡಸೂರು, ಸೊರಬದ ಅಂದವಳ್ಳಿ, ತಟ್ಟಿಗೆರೆ ಮತ್ತು ಸಾಗರದ ಸೈದೂರು, ಕೆಲವೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ನೆರೆ ಸಂಬಂಧ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದರು.

ನೆರೆ ಪೀಡಿತ ಪ್ರದೇಶಗಳಲ್ಲಿ ನದಿ ನೀರಿಗೆ ಇಳಿಯುವುದು, ಈಜಾಡುವುದು, ಅಪಾಯಕಾರಿ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವುದು, ಫೋಟೋ , ಸೆಲ್ಫಿ ತೆಗೆದುಕೊಳ್ಳುವುದು ಅಪಾಯಕಾರಿಯಾಗಿದೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ವತಿಯಿಂದ ಬ್ಯಾರಿಕೇಡ್ ಗಳನ್ನು ಹಾಕಿ, ಫ್ಲೆಕ್ಸ್ ಮತ್ತು ಸೂಚನಾ ಫಲಕಗಳನ್ನು ಅಳವಡಿಸಿ, ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ.

Shivamogga Weather Forecast ಅಪಾಯದ ಬಗ್ಗೆ ಸ್ಥಳೀಯರಿಗೆ ಅರಿವು ಮೂಡಿಸಲಾಗುತ್ತಿದೆ ಎಂದಿದ್ದಾರೆ.

ಸಾರ್ವಜನಿಕರು ಮತ್ತು ಹೊರ ಜಿಲ್ಲೆಯ ಪ್ರವಾಸಿಗರು ನೀರಿನ ಹರಿವು ಕಡಿಮೆಯಾಗುವವರೆಗೆ ಈ ಭಾಗದ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಾರದು. ನೆರೆ ಸಂಬಂಧ ಮತ್ತು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ೧೧೨ ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...