Thursday, October 3, 2024
Thursday, October 3, 2024

Malnad Development Foundation ಕಾಲೇಜು ಹಂತದಲ್ಲಿನ ಸ್ನೇಹ,ಕ್ರೀಡೆ &‌ ಮಾನವೀಯ ಸಂಬಂಧಗಳು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ- ಡಾ.ಯತೀಶ್

Date:

Malnad Development Foundation ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ (ರಿ.) ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯ, ಸಾಗರ
ಇದರ 2023-24ನೇ ಶೈಕ್ಷಣಿಕ ಸಾಲಿನ ಪ್ರಥಮ ಬಿ.ಇಡಿ. ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಸಮಾರಂಭದ ಉದ್ಘಾಟಕರಾಗಿ ಶ್ರೀ ಡಾ.ಯತೀಶ ಆರ್, ಉಪವಿಭಾಗಾಧಿಕಾರಿಗಳು, ಸಾಗರಇವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ “ಕಾಲೇಜು ಹಂತದಲ್ಲಿ ಸ್ನೇಹಿತರಕೂಟ,ಕ್ರೀಡೆ, ಮಾನವಿಯ ಸಂಭಂಧಗಳು ಬೆಳಸಿಕೋಂಡಗ ನಮ್ಮ ಭವಿಷ್ಯವನ್ನು ನಿರ್ಧರಿಸುತ್ತೆದೆ. ನನ್ನ ಶೈಕ್ಷಣಿಕಜೀವನದ ಮೇಲೆ ಪ್ರಭಾವ ಬೀರಿದ ಐದು ಜನ ಶಿಕ್ಷಕರ ವ್ಯಕ್ತಿತ್ವದ ಸ್ಮರಣೆಯೊಂದೆ ನನ್ನ ಜಿವನ ದಿಕ್ಕು ಬದಲಿಸಿತ್ತು ನಿವೊ ಜ್ಞಾನವಂತರಾದರೆ ಪ್ರಪಂಚದ ಮೂಲೆಮೂಲೆಗಳಲ್ಲೂ ಗೌರವಕ್ಕೆ ಪಾತ್ರರಾಗುವಿರಿ, ಸುಖ ಸಂತೋಷ ನಿಮ್ಮದಾಗಲ್ಲಿ ಎಂದು ತಿಳಿಸಿದರು.

ಸಂಸ್ಥೆಯ ಉಪಾಧ್ಯಕ್ಷರಾದಬಿ.ಆರ್. ಜಯಂತರವರು ಯುವಜನತೆ ಮತ್ತುದೇಶದಅಭಿವೃದ್ಧಿಕುರಿತುಮಹಾತ್ಮಗಾಂಧಿಜಿಯವರ ಹೋರಾಟವನ್ನು ಉಲ್ಲೇಖಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿಅತಿ ಹೆಚ್ಚು ಅಂಕಗಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Malnad Development Foundation ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಎಂ. ಹರನಾಥರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂ.ಡಿ.ಎಫ್.ನ ಪ್ರಧಾನ ಕಾರ್ಯದರ್ಶಿಗಳಾದ ಡಾ. ಹೆಚ್.ಎಂ. ಶಿವಕುಮಾರ್, ಸಹಕಾರ್ಯದರ್ಶಿಗಳಾದ ಶ್ರೀ ಸತ್ಯನಾರಾಯಣ ಎಂ. ಆರ್. ಹಾಗೂ ಪ್ರಾಂಶುಪಾಲರಾದ ಡಾ. ಶಿಲ್ಪ ವಿ.ಎನ್. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮೇಘ ಹೆಚ್.ಎಂ. ಮತ್ತು ವಿದ್ಯಾಈಶ್ವರ ನಾಯಕ್ ನಿರೂಪಿಸಿದರು. ಅಕ್ಷತಾ ಬಿ.ಎನ್.ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಬಿ.ಇಡಿ., ಪ್ರಶಿಕ್ಷಣಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...