Monday, December 8, 2025
Monday, December 8, 2025

DC Laxmipriya ನದಿಯಲ್ಲೇ ತೇಲುತ್ತಿರುವ ಟ್ಯಾಂಕರ್. ನೀರಿನಲ್ಲೇ ಅನಿಲ ಸೇರಿಸುವ ಪ್ರಕ್ರಿಯೆ – ಕಾರವಾರ ಡೀಸಿ ಲಕ್ಷ್ಮೀಪ್ರಿಯಾ

Date:

DC Laxmipriya ಅಂಕೋಲಾ ಸಮೀಪದ ಶಿರೂರಿನಲ್ಲಿ ಗುಡ್ಡ ಕುಸಿತ ದುರಂತದ ವೇಳೆ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿರುವ ಟ್ಯಾಂಕರ್‌ನಿಂದ ನದಿಯಲ್ಲೇ ಅಡುಗೆ ಅನಿಲ ಖಾಲಿ ಮಾಡಲು ನಿರ್ಧರಿಸಲಾಗಿದೆ. 19 ಲಕ್ಷ ರೂ. ಮೌಲ್ಯದ ಅಡುಗೆ ಅನಿಲ ನೀರು ಪಾಲಾಗಲಿದೆ
ಸುಮಾರು 30 ಟನ್‌ ಅನಿಲ ಹೊಂದಿರುವ ಈ ಟ್ಯಾಂಕರ್‌ ದುರಂತ ಸ್ಥಳದಿಂದ 7 ಕಿ.ಮೀ. ದೂರದ ಸಗಡಗೇರಿ ಗ್ರಾಮದ ಬಳಿ ನದಿಯಲ್ಲಿ ತೇಲುತ್ತಿದೆ. ಗುರುವಾರವೇ ಟ್ಯಾಂಕರ್‌ನಿಂದ ಅನಿಲವನ್ನು ವೈಜ್ಞಾನಿಕವಾಗಿ ನೀರಿಗೆ ಸೇರಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.
DC Laxmipriya ಮಂಗಳೂರಿನಿಂದ ಆಗಮಿಸಿರುವ ಎಂಆರ್‌ಪಿಎಲ್‌ ಹಾಗೂ ಎಚ್‌ಪಿಸಿಎಲ್‌ನ ತಜ್ಞರು, ನದಿಯಿಂದ ಟ್ಯಾಂಕರ್‌ ತೆರವುಗೊಳಿಸುವ ಯತ್ನಕ್ಕೆ ಮುಂದಾಗಿದ್ದಾರೆ. ಆರಂಭದಲ್ಲಿ ನದಿಯಲ್ಲೇ ಅನಿಲವನ್ನು ವಿಲೀನ ಮಾಡಲು ಜಿಲ್ಲಾಡಳಿತ ಒಪ್ಪಿಗೆ ಸೂಚಿಸದಿದ್ದರೂ ಟ್ಯಾಂಕರನ್ನು ಬದಿಗೆ ತಂದು ಖಾಲಿ ಮಾಡುವುದು ಅಪಾಯಕಾರಿ ಎಂದು ತಜ್ಞರ ತಂಡ ಮನವರಿಕೆ ಮಾಡಿಕೊಟ್ಟ ಬಳಿಕ ಇದಕ್ಕೆ ಅನುಮತಿ ನೀಡಲಾಗಿದೆ.
ಈ ನಡುವೆ ಬುಧವಾರ ಎನ್‌ಡಿಆರ್‌ಎಫ್‌ ತಂಡದವರು ಟ್ಯಾಂಕರ್‌ ಮತ್ತಷ್ಟು ತೇಲಿ ಹೋಗದಂತೆ ಹಗ್ಗ ಹಾಕಿ ಕಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಮಕ್ಕಳ ಸಾಂಸ್ಕೃತಿಕ ಪ್ರದರ್ಶನ ಮೆಚ್ಚಿದ ಸಂಸದ ರಾಘವೇಂದ್ರ

B. Y. Raghavendra ಭದ್ರಾವತಿಯ ನ್ಯೂ ಟೌನ್‌ನಲ್ಲಿರುವ ಶ್ರೀ ಸತ್ಯ ಸಾಯಿ...

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...