Wednesday, July 8, 2026
Wednesday, July 8, 2026

Gopal Krishna Belur ಸಾಗರ- ಹೊಸನಗರ ಕ್ಷೇತ್ರದ ಮಳೆಹಾನಿ ಸಮಸ್ಯೆಗೆ ಸ್ಪಂದಿಸಿ ಆನ್ ಲೈನ್ ಮೀಟೀಂಗ್ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಷ

Date:

Gopal Krishna Belur ಸಾಗರ-ಹೊಸನಗರ ಕ್ಷೇತ್ರದಲ್ಲಿ ಮಳೆಹಾನಿ ಕುರಿತು ಬೆಲ್ಜಿಯಂ ದೇಶದಿಂದ ಸಾಗರ ವಿಧಾನಸಭಾ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಆನ್’ಲೈನ್ ಮೀಟಿಂಗ್ ನಡೆಸಿದರು.

ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಮಳೆಹಾನಿ ಪರಿಹಾರ ನೀಡಲು ವಿದೇಶದಲ್ಲಿದ್ದರೂ 24*7 ಜನರ ಮೇಲಿನ ಕಾಳಜಿಗೆ ಜನತೆಯು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಳೆಯಿಂದ ಕ್ಷೇತ್ರದ ಜನತೆಗೆ ಯಾವುದೇ ರೀತಿಯ ತೊಂದರೆ ಆಗಬಾರದೆಂದು ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ ನೀಡಿದರು.

ಹಾನಿಗೊಳಗಾದ ಎಲ್ಲರಿಗೂ ಸೂಕ್ತ ರೀತಿಯ ಪರಿಹಾರ ನೀಡಲಾಗಿದೆ ಎಂದ ಸಾಗರ ತಹಶಿಲ್ದಾರರಾದ ಚಂದ್ರಶೇಖರ ನಾಯ್ಕ ಮತ್ತು ಸಾಗರ ನಗರಸಭಾ ಕಮೀಷನರ್ ಎಚ್.ಕೆ. ನಾಗಪ್ಪ ತಿಳಿಸಿದರು

ಗ್ರಾಮೀಣ ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ಕಡೆ ಹೆಚ್ಚಿನ ಗಮನ ನೀಡಲಾಗಿದ್ದು, ಹಾನಿಗೊಳಗಾದ ಪ್ರತಿಯೊಂದು ಕಡೆ ನಿಗಾ ವಹಿಸಲು ಪಿಡಿಓಗಳಿಗೆ ಹೇಳಲಾಗಿದೆ-ಇಓ ಗುರುಕೃಷ್ಣ ಶೆಣೈ

ಗ್ರಾಮೀಣ ಭಾಗದ ಕುಡಿಯುವ ನೀರು ಮತ್ತು ನೈರ್ನಲ್ಯದ ಬಗ್ಗೆ ಗಮನವಿಟ್ಡು ಜನತೆಗೆ ತೊಂದರೆ ಆಗದಂತೆ ಕೆಲಸ ಮಾಡಲಾಗಿದೆ-ಇಂಜಿನಿಯರ್ ಭರತ್

ರಸ್ತೆಗಳು ಮಳೆಯಿಂದ ಹಾನಿಗೊಳಗಾದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮತ್ತು ಸಾಗರ ತಾಲ್ಲೂಕು ಕಚೇರಿ ಮೇಲ್ಚಾವಣಿಗೆ ಟೆಂಡರ್ ಕತೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮಂಜುನಾಥ ಮಾಹಿತಿ ನೀಡಿದರು.

Gopal Krishna Belur ಮಳೆಯಿಂದ ಶಾಲೆಗಳಿಗೆ ಹಾನಿಯಾಗಿದ್ದು, ಅವುಗಳಲ್ಲಿ ಪಾಠ ಮಾಡಲು ಸಾಧ್ಯವಾಗದೇ ಇದ್ದರೆ ಅಂತಹ ಸ್ಥಳದಲ್ಲಿ ಮುಖ್ಯಶಿಕ್ಷಕರು ತೀರ್ಮಾನ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಬಿಇಓ ಪರಶುರಾಮ್ ತಿಳಸಿದರು.

ಮೆಸ್ಕಾಂ ಲೈನ್’ಮನ್ ‘ಗಳ ಪರಿಶ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಮೆಚ್ಚುಗೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...