Monday, May 4, 2026
Monday, May 4, 2026

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ಪುರಸ್ಕಾರಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಕೃತಿಗಳ ಲೇಖಕರಿಂದ ಅರ್ಜಿ ಆಹ್ವಾನ

Date:

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.
2023ನೇ ಅವಧಿಯಲ್ಲಿ ಪ್ರಕಟವಾದ ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣಬರಹ, ಅನುವಾದ-1 ಮತ್ತು 2, ಲೇಖಕರ ಮೊದಲ ಸ್ವತಂತ್ರಕೃತಿ, ಕನ್ನಡದಿಂದ ಇಂಗ್ಲೀಷಿಗೆ ಅನುವಾದ, ದಾಸ ಸಾಹಿತ್ಯ, ಸಂಕೀರ್ಣ ಕೃತಿಗಳ ತಲಾ 4 ಪ್ರತಿಗಳನ್ನು ರಿಜಿಸ್ಟಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-02 ಇವರಿಗೆ ರಿಜಿಸ್ಟರ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಆಗಸ್ಟ್ 31 ರೊಳಗಾಗಿ ಸಲ್ಲಿಸುವುದು. ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯದ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.
Karnataka Sahitya Academy ಮರುಮುದ್ರಣವಾದ ಪುಸ್ತಕಗಳು, ಪಿಹೆಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು, ಈಗಾಗಲೇ ಕ.ಸಾ.ಅ.ಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೇ ಪ್ರಕಾರದಲ್ಲಿ ಮುಂದಿನ ಮೂರು ವರ್ಷದವರೆಗೆ ಪರಿಗಣಿಸುವುದಿಲ್ಲ. ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ದೂ.ಸಂ.: 080-22211730/22106460 ಹಾಗೂ ವೆಬ್‌ಸೈಟ್ www.sahithyaacademy.karnataka.gov.in ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...